Advertisement

ರಾಜ್ಯದಲ್ಲಿ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಅಶೋಕ್‌

09:51 PM May 25, 2024 | Team Udayavani |

ಬೆಂಗಳೂರು: ಕಾಂಗ್ರೆಸ್‌ ಕೈಗೆ ಅಧಿಕಾರ ಕೊಟ್ಟರೆ, ರೌಡಿಗಳ ಕೈಯಲ್ಲಿ ಮಚ್ಚು ಲಾಂಗು, ಉಗ್ರರ ಕೈಯಲ್ಲಿ ಬಾಂಬು ಕೊಟ್ಟಂತೆ. ಶಾಂತಿ, ಸುವ್ಯವಸ್ಥೆ, ಕಾನೂನು ಪರಿಪಾಲನೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ಕಾಂಗ್ರೆಸ್‌ ಆಡಳಿತದಲ್ಲಿ ಅಕ್ಷರಶಃ ರೌಡಿ ರಾಜ್ಯವಾಗಿ ಮಾರ್ಪಟ್ಟಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಕಿಡಿಕಾರಿದ್ದಾರೆ.

Advertisement

ಎಕ್ಸ್‌ ಖಾತೆಯಲ್ಲಿ ಸರ್ಕಾರದ ವಿರುದ್ಧ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್‌ ಸರ್ಕಾರ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದ್ದೇ ತಡ, ಭಯೋತ್ಪಾದಕರು, ರೌಡಿ ಶೀಟರ್‌ಗಳು, ಕೊಲೆಗಡುಕರು, ಬಾಂಬು, ಮಚ್ಚು, ಲಾಂಗು ಹಿಡಿದು ರಾಜ್ಯದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸಿದ್ದಾರೆ ಎಂದಿದ್ದಾರೆ.

ಚನ್ನಗಿರಿಯಲ್ಲಿ ಪೊಲೀಸ್‌ ಠಾಣೆ ಧ್ವಂಸ ಮಾಡಿರುವ ಘಟನೆ, ಉಡುಪಿಯಲ್ಲಿ ನಡುರಸ್ತೆಯಲ್ಲೇ ಗ್ಯಾಂಗ್‌ ವಾರ್‌ ನಡೆದಿರುವ ಘಟನೆ ಇವನ್ನೆಲ್ಲ ನೋಡುತ್ತಿದ್ದರೆ ರಾಜ್ಯದಲ್ಲಿ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಹೇಳಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next