Advertisement

ಮತಾಂತರವಾದರೆ ಮೀಸಲಾತಿ ಸಿಗದು

12:08 AM Feb 13, 2021 | Team Udayavani |

ಹೊಸದಿಲ್ಲಿ: ದಲಿತರು ಇಸ್ಲಾಂ ಅಥವಾ ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಅವರಿಗೆ ಮೀಸಲಾತಿಯ ಸೌಲಭ್ಯಗಳು ಸಿಗುವುದಿಲ್ಲ ಎಂದು ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ರವಿಶಂಕರ್‌ ಪ್ರಸಾದ್‌ ಹೇಳಿದ್ದಾರೆ.

Advertisement

ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಇಸ್ಲಾಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರವಾದ ದಲಿತರು, ಪರಿಶಿಷ್ಟ ಜಾತಿಯವರಿಗೆ ಮೀಸಲಾಗಿ ಇರಿಸಲಾಗಿರುವ ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತಿಲ್ಲ. ಹಾಗೆಯೇ ಇತರ ಮೀಸಲಾತಿ ಸೌಲಭ್ಯಗಳೂ ಸಿಗುವುದಿಲ್ಲ ಎಂದರು.

ಆದರೆ ಹಿಂದೂ, ಸಿಕ್ಖ್ ಮತ್ತು ಬೌದ್ಧ ಧರ್ಮಕ್ಕೆ ಮತಾಂತರವಾದರೆ ಅಂಥವರಿಗೆ ಈ ಮೀಸಲು ಸೌಲಭ್ಯ ಸಿಗಲಿದೆ ಎಂದೂ ಸ್ಪಷ್ಟಪಡಿಸಿದರು.

ಈ ವಿಚಾರದಲ್ಲಿ ಯಾವುದೇ ತಿದ್ದುಪಡಿ ತರುವ ಯೋಚನೆಗಳೂ ಸರಕಾರದ ಮುಂದಿಲ್ಲ ಎಂದು ರವಿಶಂಕರ್‌ ಸ್ಪಷ್ಟವಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next