Advertisement

E- commerce, ಆನ್ ಲೈನ್ ಉದ್ಯಮದ ಕಾರ್ಮಿಕರ ಹಿತ ರಕ್ಷಣೆಗೆ ಕಾನೂನು: ಸಚಿವ ಸಂತೋಷ ಲಾಡ್

11:45 AM Oct 03, 2023 | Team Udayavani |

ವಿಜಯಪುರ: ಸ್ವಿಗ್ಗಿ, ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಇ-ಕಾಮರ್ಸ್, ಆನ್ ಲೈನ್ ವ್ಯವಸ್ಥೆಯಲ್ಲಿ ದುಡಿಯುತ್ತಿರುವ ಕಾರ್ಮಿಕರ ಸೇವಾ ಭದ್ರತೆ ಹಾಗೂ ಸಂಕಷ್ಟ ನೆರವಿಗೆ ಧಾವಿಸಲು ನಮ್ಮ ಸರ್ಕಾರ ಕಾನೂನು ರೂಪಿಸಲು ಮುಂದಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.

Advertisement

ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇ ಉದ್ಯಮದಲ್ಲಿ ಕೆಲಸ ಮಾಡುವ ಸುಮಾರು 3 ಲಕ್ಷ ಕಾರ್ಮಿಕರಿಗೆ ಇದರಿಂದ ಅನುಕೂಲವಾಗಲಿದೆ ಎಂದರು.

ಇದನ್ನೂ ಓದಿ:Maharashtra: ಸರಕಾರಿ ಆಸ್ಪತ್ರೆಯಲ್ಲಿ ಮತ್ತೆ ಏಳು ರೋಗಿಗಳು ಮೃತ, 48 ಗಂಟೆಯಲ್ಲಿ 31 ಸಾವು

ಇದರಿಂದ ಅಪಘಾತ, ವಿಮಾ ಸೌಲಭ್ಯ, ಆರೋಗ್ಯ, ಕಲ್ಯಾಣ ಕಾರ್ಯಕ್ರಮ ಕೈಗೊಳ್ಳಲು ಕಾನೂನು ಜಾರಿಗೆ ಮುಂದಾಗಲಿದ್ದೇವೆ. ಇದರಿಂದ ಆನ್ ಲೈನ್ ಉದ್ಯಮದಲ್ಲಿ ದುಡಿಯುವ ಕಾರ್ಮಿಕರ ಹಿತ ರಕ್ಷಣೆಗೆ ಈ ಕಾನೂನು ಸಹಕಾರಿ ಆಗಲಿದೆ ಎಂದರು.

ಚುನಾವಣೆ ಸಂದರ್ಭದಲ್ಲಿ ಮಾತ್ರ ಪಕ್ಷದ ಸಂಘಟನೆಯಲ್ಲ. ಪಕ್ಷದ ವರಿಷ್ಠ ನಾಯಕ ರಾಹುಲ್ ಗಾಂಧಿ ಅವರ ಭಾರತ ಜೋಡೋ ಯಾತ್ರೆಯಿಂದಲೇ ದೇಶದಲ್ಲಿ ಕಾಂಗ್ರೆಸ್ ಲೋಕಸಭೆ ಚುನಾವಣೆ ಸಿದ್ಧತೆ ನಡೆಸಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next