Advertisement

Protest: ಪೊಲೀಸ್ ದೌರ್ಜನ್ಯ ಖಂಡಿಸಿ ಮಂಗಳೂರಿನಲ್ಲಿ ವಕೀಲರ ಪ್ರತಿಭಟನೆ

10:50 AM Dec 04, 2023 | Team Udayavani |

ಮಂಗಳೂರು: ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಂ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯವನ್ನು ಖಂಡಿಸಿ ಮಂಗಳೂರು ನ್ಯಾಯಾಲಯದ ಆವರಣದಲ್ಲಿ ಸೋಮವಾರ ಮಂಗಳೂರು ವಕೀಲರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

Advertisement

ಮಾಜಿ ಅಧ್ಯಕ್ಷ ಶಂಭು ಶರ್ಮ ಅವರು ಮಾತನಾಡಿ, ದೌರ್ಜನ್ಯ ಎಸಗಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳಬೇಕು. ವಕೀಲರ ರಕ್ಷಣಾ ಕಾಯಿದೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಅಧ್ಯಕ್ಷ ಪೃಥ್ವಿರಾಜ್ ರೈ ಅವರು ಮಾತನಾಡಿ ಇದು ಪ್ರಾಥಮಿಕ ಹಂತದ ಹೋರಾಟ. ಇದು ಪೊಲೀಸರಿಗೆ ಎಚ್ಚರಿಕೆ. ಇಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದರು.

ಪ್ರಧಾನ ಕಾರ್ಯದರ್ಶಿ‌ ಶ್ರೀಧರ ಎಣ್ಮಕಜೆ ಮತ್ತಿತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ: Result: ಮಿಜೋರಾಂನಲ್ಲಿ ZPM, MNF ನಡುವೆ ಭಾರಿ ಪೈಪೋಟಿ… ಯಾರು ಮುನ್ನಡೆಯಲ್ಲಿದ್ದಾರೆ ?

Advertisement
Advertisement

Udayavani is now on Telegram. Click here to join our channel and stay updated with the latest news.

Next