Advertisement

ವಕೀಲರ ಜವಾಬಾರಿ ಹೆಚ್ಚಿದೆ: ಹುಕ್ಕೇರಿ

05:42 PM Dec 04, 2021 | Team Udayavani |

ಶಹಾಪುರ: ಸಮಾಜದಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ಅಪರಾಧ ಪ್ರಕರಣಗಳು ನೂತನ ಬಗೆಯಲ್ಲಿ ನಡೆಯುತ್ತಿರುವುದರಿಂದ ಅದನ್ನು ಎದುರಿಸಲು ವಕೀಲರು ಸಿದ್ಧರಾಗಬೇಕಾಗಿದೆ ಎಂದು ಪ್ರಧಾನ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶ ಕಾಡಪ್ಪ ಹುಕ್ಕೇರಿ ತಿಳಿಸಿದರು.

Advertisement

ನಗರದಲ್ಲಿ ವಕೀಲರ ಸಂಘವು ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ವಕೀಲರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯುವ ವಕೀಲರು ಸದಾ ಅಧ್ಯಯನ ಶೀಲರಾಗಬೇಕು. ನ್ಯಾಯಾಲಯದ ಕಲಾಪದಲ್ಲಿ ಹಿರಿಯ ವಕೀಲರು ವಾದ ಮಂಡಿಸುತ್ತಿರುವಾಗ ಅದನ್ನು ಗಮನವಿಟ್ಟು ಕೇಳಬೇಕು. ನಿರಂತರವಾಗಿ ಪರಿಶ್ರಮ ಮಾಡುತ್ತಾ ಕೆಲಸ ಮಾಡಬೇಕು. ಕಕ್ಷಿದಾರರ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು ಎಂದರು.

ವಕೀಲರ ಸಂಘದ ಅಧ್ಯಕ್ಷ ಶಾಂತಗೌಡ ವಿ. ಪಾಟೀಲ್‌ ಮಾತನಾಡಿದರು. ಸರ್ಕಾರಿ ಅಭಿಯೋಜಕ ವಿನಾಯಕ ಕೋಡ್ಲಾ, ಹಿರಿಯ ವಕೀಲರಾದ ಶ್ರೀನಿವಾಸರಾವ್‌ ಕುಲಕರ್ಣಿ, ಎಸ್‌.ಶೇಖರ, ಎಂ.ಆರ್‌. ಮಾಲಿ ಪಾಟೀಲ್‌, ಭೀಮನಗೌಡ, ನಾಜಿಯಾ ಬೇಗಂ, ಆರ್‌.ಎಂ. ಹೊನ್ನಾರಡ್ಡಿ, ವಿಶ್ವನಾಥರಡ್ಡಿ ಸಾಹು, ಯೂಸೂಫ್‌ ಸಿದ್ದಕ್ಕಿ, ಟಿ.ನಾಗೇಂದ್ರ, ವಿಶ್ವನಾಥರಡ್ಡಿ ಪಾಟೀಲ್‌, ಎಂ.ಎನ್‌. ಪೂಜಾರಿ, ಹೇಮರಡ್ಡಿ ಕೊಂಗಂಡಿ, ಸಂತೋಷ ಸತ್ಯಂಪೇಟೆ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next