Advertisement

ಎಂಎಲ್‌ಸಿ ಆಗಿ ಲಕ್ಷ್ಮಣ ಸವದಿ ಪ್ರಮಾಣ ವಚನ

11:31 PM Feb 18, 2020 | Lakshmi GovindaRaj |

ವಿಧಾನ ಪರಿಷತ್ತು: ಮೇಲ್ಮನೆಗೆ ನೂತನ ಸದಸ್ಯರಾಗಿ ಆಯ್ಕೆಯಾದ ಸಚಿವ ಲಕ್ಷ್ಮಣ ಸವದಿ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು. ಸದನದ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ, ನೂತನ ಸದಸ್ಯರನ್ನು ಸ್ವಾಗತಿಸಿ, ಸಭೆಗೆ ಪರಿಚಯಿಸಿದರು. ಬಳಿಕ ಪ್ರಮಾಣವಚನ ಸ್ವೀಕರಿಸುವಂತೆ ಸೂಚಿಸಿದರು.

Advertisement

ಅದರಂತೆ ಕಾರ್ಯದರ್ಶಿಗಳಿದ್ದಲ್ಲಿಗೆ ತೆರಳಿದ ಲಕ್ಷ್ಮಣ ಸವದಿ, ಶ್ರದ್ಧೆ ಮತ್ತು ನಿಷ್ಠೆಯಿಂದ ಸೇವೆ ಸಲ್ಲಿಸುವುದಾಗಿ ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇದೇ ವೇಳೆ ಸಚಿವ ಸಂಪುಟ ರಚನೆ ಬಳಿಕ ಆಗುತ್ತಿರುವ ಮೊದಲ ಅಧಿವೇಶನದ ಹಿನ್ನೆಲೆಯಲ್ಲಿ ಸಚಿವರಾದ ಡಾ.ಸಿ.ಎನ್‌. ಅಶ್ವಥ್‌ ನಾರಾಯಣ, ವಿ. ಸೋಮಣ್ಣ, ಕೆ. ಗೋಪಾಲಯ್ಯ, ಎಸ್‌.ಟಿ. ಸೋಮಶೇಖರ್‌, ಸಿ.ಸಿ. ಪಾಟೀಲ್‌, ಆನಂದ್‌ ಸಿಂಗ್‌ ಅವರನ್ನು ಪರಿಚಯಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next