Advertisement

Laxmeshwar ಮಗನ ಹಠಕ್ಕೆ ಮುಸ್ಲಿಮರ ಮನೆಯಲ್ಲಿ ಗಣೇಶ ಹಬ್ಬ !

11:01 PM Sep 08, 2024 | Team Udayavani |

ಲಕ್ಷ್ಮೇಶ್ವರ: ಮುಸ್ಲಿಂ ವ್ಯಕ್ತಿಯೊಬ್ಬರು ಮಗನ ಆಸೆ, ಪ್ರೀತಿ, ಹಠದಿಂದ ಮನೆಯಲ್ಲಿ ಗಣೇಶ ಚತುರ್ಥಿಯಂದು ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಪೂಜಿಸಿದ್ದಾರೆ.

Advertisement

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಮುಸ್ತಾಫ್‌ ಮಾಬುಸಾಬ್‌ ಕೋಲ್ಕಾರ ಹಾಗೂ ಯಾಸ್ಮಿನಾಬಾನು ದಂಪತಿಗೆ ಐವರು ಮಕ್ಕಳು. ಕೊನೆಯ ಮಗ ಮೂರು ವರ್ಷದ ಹಜರತಲಿಗೆ ಗಣೇಶ ಮೂರ್ತಿಯೆಂದರೆ ಪ್ರೀತಿ. ಗಣೇಶನನ್ನು ಮನೆಗೆ ತೆಗೆದುಕೊಂಡು ಹೋಗಬೇಕು, ಎಲ್ಲರಂತೆ ಪೂಜಿಸಬೇಕು, ಪಟಾಕಿ ಹೊಡೆಯಬೇಕು, ಕುಣಿದು ಕುಪ್ಪಳಿಸಬೇಕೆಂಬ ಹಂಬಲ. ಈ ಬಗ್ಗೆ ತಂದೆ-ತಾಯಿ ಹತ್ತಿರ ಕೇಳಿ ಅತ್ತು ಕರೆದು ಹಠ ಮಾಡಿದ್ದರೂ ತಂದೆ ಹೇಗೋ ಸಮಾಧಾನ ಮಾಡಿ ಮಾತು ಮರೆಸಿದ್ದರು. ಆದರೆ ಗಣೇಶ ಚತುರ್ಥಿ ದಿನ ಎಲ್ಲರೂ ಮನೆಗೆ ಗಣೇಶ ಮೂರ್ತಿ ತರುವುದನ್ನು ಗಮನಿಸಿದ ಹಜರತಲಿ ಅಣ್ಣನೊಂದಿಗೆ ಗಣೇಶನ ಮೂರ್ತಿ ಮನೆಗೆ ತಂದಿದ್ದು, ತಂದೆ-ತಾಯಿ ಮಗನ ಬಗ್ಗೆ ಬೇಸರಿಸಿಕೊಳ್ಳದೆ ಗಣೇಶನ ಮೂರ್ತಿಯನ್ನು ಮನೆಯಲ್ಲಿ ಪ್ರತಿಷ್ಠಾಪಿಸಿ ಪೂಜಿಸಿದ್ದಾರೆ.

ಮಗ ಹಜರತಲಿಗೆ ಗಣೇಶನ ಮೂರ್ತಿ ಎಂದರೆ ತುಂಬಾ ಇಷ್ಟ. ದೇವರೇ ಮನೆಗೆ ಬಂದಂತಾಗಿದ್ದು ಶ್ರದ್ಧಾ-ಭಕ್ತಿಯಿಂದ ಗಣೇಶನ ಮೂರ್ತಿ ಪೂಜಿಸುತ್ತೇವೆ. ಪ್ರತಿ ವರ್ಷವೂ ನಮ್ಮ ಮನೆಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸುತ್ತೇವೆ ಎಂದು ಹಜರತಲಿ ತಂದೆ ಮುಸ್ತಫಾ, ತಾಯಿ ಯಾಸ್ಮಿನಾಬಾನು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next