Advertisement

ಗುಜ್ಜಾಡಿ ಲಕ್ಷ್ಮೀನಾರಾಯಣ ದೇವಸ್ಥಾನಕ್ಕೆ ಜಗದೀಶ್‌ ಶೆಟ್ಟರ್‌ ಭೇಟಿ

03:15 PM Apr 14, 2017 | |

ಕುಂದಾಪುರ:   ರಾಜ್ಯ ವಿಧಾನಸಭೆಯ ವಿಪಕ್ಷದ ನಾಯಕ ಜಗದೀಶ ಶೆಟ್ಟರ್‌ ಅವರು ಗುಜ್ಜಾಡಿಯ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿದರು.

Advertisement

ದೇಗುಲಕ್ಕೆ ಭೇಟಿ ನೀಡಿದ ಜಗದೀಶ ಶೆಟ್ಟರ್‌ ಅವರನ್ನು ದೇವಳದ ಅಡಳಿತ ಮಂಡಳಿಯ ಪ್ರಮುಖರಾದ ಗುಜ್ಜಾಡಿ ಪ್ರಭಾಕರ ನಾಯಕ್‌ ಅವರು ಬರಮಾಡಿಕೊಂಡು ದೇವಸ್ಥಾನದ ಬಗ್ಗೆ ಹಾಗೂ ನಾಗಮಂಡಲೋತ್ಸವದ ಬಗ್ಗೆ ಮಾಹಿತಿ ನೀಡಿದರು.ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ ಜಗದೀಶ ಶೆಟ್ಟರ್‌ ದೇವಸ್ಥಾನದ ಗುಜ್ಜಾಡಿ ನಾಯಕ್‌ ಕುಟುಂಬಸ್ಥರ ಮೂಲ ನಾಗಬನದಲ್ಲಿ ಗುರುವಾರ ನಡೆಯಲಿ ರುವ ಏಕಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮಗಳನ್ನು ವೀಕ್ಷಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.

ಶಿಲ್ಪಾ ಜಗದೀಶ ಶೆಟ್ಟರ್‌, ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ರಘುಪತಿ ಭಟ್‌, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ.ಎಂ.ಸುಕುಮಾರ್‌ ಶೆಟ್ಟಿ, ಆರೆಸ್ಸೆಸ್‌ ಮುಖಂಡ ಶಂಭು ಶೆಟ್ಟಿ, ಉದ್ಯಮಿ ರಮೇಶ ಶೆಟ್ಟಿ, ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ತಾ.ಪಂ. ಸದಸ್ಯ ನಾರಾಯಣ ಕೆ. ಗುಜ್ಜಾಡಿ, ಗುಜ್ಜಾಡಿ ಪಂ. ಅಧ್ಯಕ್ಷ ಹರೀಶ ಮೇಸ್ತ, ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ, ಗಂಗೊಳ್ಳಿ ಗ್ರಾ.ಪಂ. ಸದಸ್ಯ ಬಿ. ಗಣೇಶ ಶೆಣೈ, ಜಿ. ರೋಹಿದಾಸ ನಾಯಕ್‌, ಗಣೇಶ ನಾಯಕ್‌, ಮೋಹನ ನಾಯ್ಕ, ಅಶೋಕ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.

ಬೈಂದೂರು ಶಾಸಕ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಕೆ. ಗೋಪಾಲ ಪೂಜಾರಿ, ಜಿ.ಪಂ. ಸದಸ್ಯೆ ಶೋಭಾ ಜಿ. ಪುತ್ರನ್‌, ತಾ.ಪಂ. ಸದಸ್ಯ ರಾಜು ದೇವಾಡಿಗ ಅವರು ಗುಜ್ಜಾಡಿಯ ಶ್ರೀಲಕ್ಷ್ಮೀನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next