Advertisement

ಲಾಯಿಲ: ಬೈಕ್‌ -ಬಸ್‌ ಅಪಘಾತ; ಯುವಕ ಸ್ಥಳದಲ್ಲೇ ಸಾವು

12:37 AM Dec 21, 2022 | Team Udayavani |

ಬೆಳ್ತಂಗಡಿ: ಇಲ್ಲಿನ ಲಾಯಿಲ ಗ್ರಾಮದ ಕೊಯ್ಯೂರು ಕ್ರಾಸ್‌ ಸಮೀಪ ಸಾರಿಗೆ ಬಸ್‌ ಹಾಗೂ ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ. 20ರಂದು ಸಂಜೆ ನಡೆದಿದೆ.

Advertisement

ಉಜಿರೆ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸಕ್ಕಿದ್ದ ಬಂಟ್ವಾಳ ತಾಲೂಕಿನ ನಾವೂರು ಮಲೆಬಾವು ನಿವಾಸಿ ವಿಜಯ್‌ (25) ಮೃತಪಟ್ಟ ಯುವಕ. ಸಹಸವಾರ ಬಂಟ್ವಾಳ ತಾಲೂಕಿನ ಕಾಡಬೆಟ್ಟು ಗ್ರಾಮದ ಬಾಂಬಿಲ ನಿವಾಸಿ ಶೈಲೇಶ್‌ (25). ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತ ವಿಜಯ್‌ ಮತ್ತು ಶೈಲೇಶ್‌ ಬಂಟ್ವಾಳದ ಮನೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಸಾರಿಗೆ ಬಸ್‌ ಢಿಕ್ಕಿ ಹೊಡೆದಿದೆ. ಢಿಕ್ಕಿ ರಭಸಕ್ಕೆ ವಿಜಯ್‌ ಸ್ಥಳದಲ್ಲೇ ಮೃತಪಟ್ಟಿದ್ದು ಬೈಕ್‌ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

ಪೊಲೀಸರು ಸ್ಥಳಕ್ಕಾಗಿಮಿಸಿ ಸ್ಥಳೀಯರ ಸಹಾಯದಿಂದ ಸಂಚಾರ ಸುಗಮಗೊಳಿಸಿದ್ದಾರೆ. ಬಸ್‌ ವಶಕ್ಕೆ ಪಡೆಯಲಾಗಿದ್ದು, ಬೆಳ್ತಂಗಡಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ವಿಜಯ್‌ ತಂದೆ ಈ ಹಿಂದೆಯೇ ಮೃತಪಟ್ಟಿದ್ದು ತಾಯಿ ಹಾಗೂ ತಂಗಿಯೊಂದಿಗೆ ವಾಸವಾಗಿದ್ದರು. ಬಡಕುಟುಂಬದ ಮನೆಗೆ ಆಧಾರ ಸ್ಥಂಭವಾಗಿದ್ದ ವಿಜಯ್‌ ನನ್ನು ಕಳೆದುಕೊಂಡ ಕುಟುಂಬ ದುಃಖದಿಂದ ಮರುಗಿದೆ.

Advertisement

ಇದನ್ನೂ ಓದಿ: 7 ದಿನಗಳಲ್ಲಿ ಭೂ ಪರಿವರ್ತನೆ ಕಡ್ಡಾಯ: ರಾಜ್ಯದ ಇತರ ಜಿಲ್ಲೆಗಳಲ್ಲಿ ಹೂಡಿಕೆ ಉತ್ತೇಜನ

Advertisement

Udayavani is now on Telegram. Click here to join our channel and stay updated with the latest news.

Next