Advertisement

ಲೀಡರ್‌ ಮಾಡುವ “ಲೀಡ್‌’

03:50 AM Apr 11, 2017 | |

ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವುದು ಪ್ರತಿಯೊಬ್ಬ ಜಿಲ್ಲಾಧಿಕಾರಿಗೆ ಸವಾಲಾಗಿ ಪರಿಣಮಿಸುತ್ತಿದೆ. ಈ ಎಲ್ಲ ಸಮಸ್ಯೆಗಳನ್ನು ನಿವಾರಿಸಲೆಂದೇ “ಲೀಡ್‌’ ಎಂಬ ಒಂದು ನೂತನ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ.

Advertisement

ಕೇಂದ್ರ ಹಾಗು ರಾಜ್ಯ ಸರ್ಕಾರಗಳ ನೀತಿ ಹಾಗು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಜಿಲ್ಲಾಡಳಿತ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಬಹುತೇಕ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳು ಜಿಲ್ಲಾಡಳಿತದ ಮೂಲಕ ಅಥವಾ ಅದರ ಸಹಾಯದಿಂದ ಕಾರ್ಯಾನ್ವಿತಗೊಳಿಸಲಾಗುತ್ತದೆ. 1992ರಲ್ಲಿ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ಕೇಂದ್ರೀಕರಣದ ಆಶಯವನ್ನು ಸಾಕಾರಗೊಳಿಸಲು ಪಂಚಾಯತಿ ರಾಜ್‌ ಕಾಯ್ದೆಯನ್ನು ಜಾರಿಗೊಳಿಸಿತು. ಅಂದಿನಿಂದ ಮೂಲಭೂತ ಸೌಕರ್ಯಗಳನ್ನು ಪೂರೈಸುವಲ್ಲಿನ ಬಹುತೇಕ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಪಂಚಾಯಿತಿ ರಾಜ್‌ ಸಂಸ್ಥೆಗಳಿಗೆ ಹಸ್ತಾಂತರಿಸಲಾಗಿದೆ. ಆದರೆ ಪಂಚಾಯಿತಿ ರಾಜ್‌ ಸಂಸ್ಥೆಗಳಿಗೆ ಈ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾಡಳಿತದ ಸಹಾಯ ಬಹಳ ಮುಖ್ಯ. ಜಿಲ್ಲೆಯ ಬಹುತೇಕ ಎಲ್ಲ ಅಭಿವೃದ್ಧಿ ಕಾರ್ಯಗಳ ಹೊಣೆ ಜಿಲ್ಲಾಧಿಕಾರಿಯ ಮೇಲಿರುತ್ತದೆ. ಇವರ ಅಡಿಯಲ್ಲಿ ಒಂದು ಜಿಲ್ಲೆಯ ಪ್ರಗತಿಪರ ಕಾರ್ಯಗಳನ್ನು ಜಾರಿಗೊಳಿಸಲಾಗುತ್ತದೆ. ಆದರೆ ಹೆಚ್ಚುತ್ತಿರುವ ಸರ್ಕಾರದ ಕಾರ್ಯಗಳು ಮತ್ತು ಜನರ ಬೇಡಿಕೆಗಳು ಜಿಲ್ಲಾಧಿಕಾರಿಯ ಕೆಲಸವನ್ನು ಹೆಚ್ಚಿಸಿದೆ. ಒಂದು ಜಿಲ್ಲೆಯಲ್ಲಿ ಒಬ್ಬ ಜಿಲ್ಲಾಧಿಕಾರಿ ನೂರಕ್ಕೂ ಹೆಚ್ಚು ಸಮಿತಿಗಳ ಆಧ್ಯಕ್ಷರಾಗಿರುತ್ತಾರೆ. ಜೊತೆಗೆ ಬಹುತೇಕ ಜಿಲ್ಲೆಗಳಲ್ಲಿ ಮಾನವ ಸಂಪನ್ಮೂಲದ ಕೊರತೆಯಿದೆ. ಇದೆಲ್ಲದರ ನಡುವೆ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವುದು ಪ್ರತಿಯೊಬ್ಬ ಜಿಲ್ಲಾಧಿಕಾರಿಗೆ ಸವಾಲಾಗಿ ಪರಿಣಮಿಸುತ್ತಿದೆ. ಈ ಎಲ್ಲ ಸಮಸ್ಯೆಗಳನ್ನು ನಿವಾರಿಸಲೆಂದೇ “ಲೀಡ್‌’ ಎಂಬ ಒಂದು ನೂತನ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. 

ಏನಿದು “ಲೀಡ್‌’ ?
ಜಿಲ್ಲೆಯಲ್ಲಿನ ಮಾನವ ಸಂಪನ್ಮೂಲದ ಕೊರತೆಯನ್ನು ನಿವಾರಿಸುವ ಜೊತೆಗೆ ಉತ್ಸಾಹಿ ಯುವಕರಿಗೆ ಜಿಲ್ಲೆಯಲ್ಲಿನ ಪ್ರಗತಿಪರ, ನೂತನ ಅಭಿವೃದ್ಧಿ ಕಾರ್ಯಗಳಲ್ಲಿ ಜಿಲ್ಲಾಧಿಕಾರಿಯ ಜೊತೆಗೆ ಕೆಲಸ ಮಾಡುವ ಅವಕಾಶವನ್ನು ಈ “ಲೀಡ್‌’ ಕಾರ್ಯಕ್ರಮವು ಒದಗಿಸುತ್ತದೆ. ಜಿಲ್ಲೆಯ ಆಡಳಿತ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ಮತ್ತು ಜಿಲ್ಲಾಧಿಕಾರಿಗೆ ನೂತನ ಅಭಿವೃದ್ಧಿ ಕಾರ್ಯಗಳಲ್ಲಿ ನೆರವು ನೀಡಲು ಈ ಕಾರ್ಯಕ್ರಮದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಪ್ರಮುಖ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಈ ಅಭ್ಯರ್ಥಿಗಳು ಸಹಾಯ ಮಾಡುತ್ತಾರೆ. ಸಾರ್ವಜನಿಕ ರಂಗದಲ್ಲಿ ಕೆಲಸ ಮಾಡುವ ಮತ್ತು ಸಮರ್ಥ ನಾಯಕತ್ವ ಗುಣಗಳನ್ನು ಹೊಂದಿದ ಯುವಕರಿಗೆ ಈ ಕಾರ್ಯಕ್ರಮವು ದೇಶದ ಅಭಿವೃದ್ಧಿಯಲ್ಲಿ ಕೆಲಸ ಮಾಡಲು ಅವಕಾಶವನ್ನು ಒದಗಿಸುತ್ತದೆ. ಅಭ್ಯರ್ಥಿಗಳು ನೇರವಾಗಿ ಜಿಲ್ಲಾಧಿಕಾರಿಯ ಕೆಳಗೆ ಕೆಲಸ ಮಾಡುವುದರಿಂದ ಯೋಜನೆಗಳನ್ನು ಸಮರ್ಥವಾಗಿ ಜಾರಿಗೊಳಿಸಬಹುದು. ಜೊತೆಗೆ ಆಡಳಿತದಲ್ಲಿನ ಹೊಸ ವಿಷಯಗಳನ್ನು ಕಲಿಯಲು ಹೆಚ್ಚಿನ ಅವಕಾಶಗಳಿರುತ್ತವೆ. 

ಅರ್ಹತೆ ಏನು?
ಉತ್ತಮ ನಾಯಕತ್ವ ಗುಣಗಳನ್ನು ಹೊಂದಿದ, ಪ್ರತಿಷ್ಠಿತ ವಿದ್ಯಾಸಂಸ್ಥೆಗಳಿಂದ ಪದವಿಯನ್ನು ಪೂರ್ಣಗೊಳಿಸಿದ ಯುವಕರು ಈ ಕಾರ್ಯಕ್ರಮದ ಲಾಭವನ್ನು ಪಡೆಯಬಹುದು. ಅಭ್ಯರ್ಥಿಗಳು ಉತ್ತಮ ಸಂವಹನ ಕೌಶಲಗಳನ್ನು ಹೊಂದಿರಬೇಕು ಮತ್ತು ಸಮಸ್ಯೆಗಳನ್ನು ನಿವಾರಿಸುವ, ಸಮರ್ಥ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಾಗು ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಗುಣಗಳನ್ನು ಪ್ರದರ್ಶಿಸಬೇಕು. ಅಭ್ಯರ್ಥಿಗಳು 2- 4 ವರ್ಷದ ಕೆಲಸದ ಅನುಭವವನ್ನು ಹೊಂದಿರಬೇಕು. ಹಿಂದಿ ಮತ್ತು ಇಂಗ್ಲಿಷ್‌ ಭಾಷಾಜ್ಞಾನ ಚೆನ್ನಾಗಿರಬೇಕು. ಆರೋಗ್ಯ, ಶಿಕ್ಷಣ, ಕುಡಿಯುವ ನೀರು ಮತ್ತು ನಿರ್ಮಲೀಕರಣ, ಜೀವನೋಪಾಯ ಇತ್ಯಾದಿ ಕ್ಷೇತ್ರಗಳಲ್ಲಿ ಅನುಭವವನ್ನು ಹೊಂದಿದ ಅಭ್ಯರ್ಥಿಗಳಿಗೆ ಹೆಚ್ಚಿನ ಪ್ರಾಶಸ್ತ್ಯ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವೆಬ್‌ಸೈಟ್‌ಗೆ ಭೇಟಿಕೊಡಿ- lead.swaniti.com

ಆಯ್ಕೆ ಪ್ರಕ್ರಿಯೆ
ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್‌ಲೈನ್‌ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೇಳೆ ಅಭ್ಯರ್ಥಿಗಳು ತಮ್ಮ ರೆಸ್ಯೂಮೆಯನ್ನು ShOph) ಕೂಡ ಸಲ್ಲಿಸುವುದು ಕಡ್ಡಾಯ. ಎಲ್ಲ ಅಭ್ಯರ್ಥಿಗಳ ಅರ್ಜಿಗಳನ್ನು ಪರಿಶೀಲಿಸಿದ ನಂತರದಲ್ಲಿ ಎರಡನೇ ಹಂತಕ್ಕೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಎರಡನೇ ಹಂತಕ್ಕೆ ಆಯ್ಕೆಯಾದ ಅಭ್ಯರ್ಥಿಗಳು ಒಂದು ನಿರ್ದಿಷ್ಟ ಸಮಸ್ಯೆಯ ಮೇಲೆ ಕೆಲಸ ಮಾಡಬೇಕು. ಇದರ ಜೊತೆಗೆ ಅಭ್ಯರ್ಥಿಗಳ ಸಂದರ್ಶನವನ್ನು ಟೆಲಿಫೋನ್‌ ಮೂಲಕ ಅಥವಾ ಸ್ಕೈಪ್‌ (Tm¦th) ಮಾಧ್ಯಮದ ಮೂಲಕ ನಡೆಸಲಾಗುತ್ತದೆ. ಈ ಎಲ್ಲ ಹಂತಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಡೆಯದಾಗಿ ವೈಯಕ್ತಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ. 

Advertisement

ಕಡೆಯ ಹಂತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸೂಕ್ತ ತರಬೇತಿಯ ನಂತರದಲ್ಲಿ ಜಿಲ್ಲಾಧಿಕಾರಿಗಳ ಕೆಳಗೆ ಕೆಲಸ ಮಾಡಲು ಕಳಿಸಲಾಗುತ್ತದೆ. 
ಅರ್ಜಿ ಸಲ್ಲಿಸಲು 17 ಏಪ್ರಿಲ್‌, 2017 ಕಡೆಯ ದಿನಾಂಕವಾಗಿದೆ.

ಕೆಲಸದ ಅವಧಿ ಮತ್ತು ವೇತನ
ಪ್ರತಿ ಅಭ್ಯರ್ಥಿಯೂ ನಿರ್ದಿಷ್ಟ ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯವರೆಗೆ ಕೆಲಸ ಮಾಡುತ್ತಾರೆ. ಈ ವೇಳೆಯಲ್ಲಿ ಮಾಸಿಕ ರು. 50,000/- ವೇತನವನ್ನು ಪಡೆಯುತ್ತಾರೆ. ಸಾರ್ವಜನಿಕ ರಂಗದಲ್ಲಿ ಮೂಲಭೂತ ಸಮಸ್ಯೆಗಳನ್ನು ನಿವಾರಿಸುವ ಕಾರ್ಯದಲ್ಲಿ ‘ಲೀಡ್‌’ ಅಭ್ಯರ್ಥಿಗಳು ನೇರವಾಗಿ ಕೆಲಸ ಮಾಡುವುದರಿಂದ ಭವಿಷ್ಯದಲ್ಲಿ ಅಭಿವೃದ್ಧಿ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಉತ್ತಮ ಕೆಲಸದ ಅವಕಾಶಗಳನ್ನು ಪಡೆಯಬಹುದು. 

ಪ್ರಶಾಂತ್‌. ಎಸ್‌. ಚಿನ್ನಪ್ಪನವರ್‌, ಚಿತ್ರದುರ್ಗ

Advertisement

Udayavani is now on Telegram. Click here to join our channel and stay updated with the latest news.

Next