Advertisement

ಸರ್ದಾಜೀ ಖಲಿಸ್ತಾನಿ,ನಾವು ಪಾಕಿಸ್ತಾನಿ,ಕೇವಲ ಬಿಜೆಪಿ ಮಾತ್ರ ಹಿಂದೂಸ್ತಾನಿ|ಮೆಹಬೂಬಾ ಮುಫ್ತಿ

05:24 PM Sep 21, 2021 | Team Udayavani |

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Advertisement

ಮಂಗಳವಾರ ಮಾಧ್ಯಮಗಳಿಗೆ ನೀಡಿರುವ ಸಂದರ್ಶನಲ್ಲಿ ಕೇಂದ್ರ ಬಿಜೆಪಿ ಸರ್ಕಾರವನ್ನು ಟೀಕಿಸಿರುವ ಮುಫ್ತಿ, ಜವಾಹರಲಾಲ್ ನೆಹರೂ ಹಾಗೂ ಅಟಲ್ ಬಿಹಾರಿ ವಾಜಪೇಯಿಯಂತಹ ನಾಯಕರು ದೂರದೃಷ್ಟಿ ಹೊಂದಿದ್ದರು. ಆದರೆ, ಸದ್ಯದ ಕೇಂದ್ರ ಸರ್ಕಾರ ಹಿಂದೂ ಮತ್ತು ಮುಸ್ಲಿಂರ ನಡುವೆ ಒಡಕು ಮೂಡಿಸುತ್ತಿದೆ ಎಂದು ಆರೋಪಿಸಿದ್ದಾರೆ.

ದೆಹಲಿಯಲ್ಲಿ ಕುಳಿತಿರುವವರು ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರವನ್ನು ಪ್ರಯೋಗಾಲಯವಾಗಿ ಬಳಸಿಕೊಂಡು ಇಲ್ಲಿ ಪ್ರಯೋಗ ಮಾಡುತ್ತಿದ್ದಾರೆ. ಜಮ್ಮು-ಕಾಶ್ಮೀರದ ಬಗ್ಗೆ ಜವಾಹರ್ ಲಾಲ್ ನೆಹರೂ ಹಾಗೂ ಅಟಲ್ ಬಿಹಾರಿ ವಾಜಪೇಯಿಯಂತಹ ನಾಯಕರು ಒಳ್ಳೆಯ ದೃಷ್ಠಿಕೋನ ಹೊಂದಿದವರಾಗಿದ್ದರು. ಆದರೆ, ಈ ಸರ್ಕಾರ ಹಿಂದೂ ಮತ್ತು ಮುಸ್ಲಿಂರನ್ನು ಒಡೆದು ಆಳುತ್ತಿದೆ. ಸರ್ದಾಜಿಗಳು ಖಲಿಸ್ತಾನಿ, ನಾವು ಪಾಕಿಸ್ತಾನಿ, ಕೇವಲ ಬಿಜೆಪಿ ಮಾತ್ರ ಹಿಂದೂಸ್ತಾನಿ ಎನ್ನುವಂತೆ ವರ್ತಿಸುತ್ತಿದೆ ಎಂದು ಮುಫ್ತಿ ಹೇಳಿದ್ದಾರೆ.

ಇನ್ನು ಕಳೆದ ಎರಡು ದಿನಗಳ ಹಿಂದೆಯಷ್ಟೆ ಬಿಜೆಪಿ ವಿರುದ್ಧ ಟೀಕೆ ಮಾಡಿದ್ದ ಮುಫ್ತಿ, ಚುನಾವಣೆಗಳು ಸಮೀಪಿಸುತ್ತಿವೆ. ಈ ಬಾರಿ ಬಿಜೆಪಿ ಪಕ್ಷವು ತಾಲಿಬಾನ್ ಹಾಗೂ ಅಫ್ಗಾನಿಸ್ತಾನ್‍ ವಿಷಯಗಳನ್ನು ರಾಜಕೀಯ ವಿಷಯವಾಗಿ ಬಳಸಿಕೊಳ್ಳಲಿದೆ. ಒಂದು ವೇಳೆ ಇವು ವರ್ಕೌಟ್ ಆಗದಿದ್ದರೆ, ಪಾಕಿಸ್ತಾನ್ ವಿಷಯಗಳನ್ನು ಎಳೆದು ತರುತ್ತದೆ ಎಂದು ದೂರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next