Advertisement
ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ಯುವ ದೃಷ್ಟಿ ಹೆಸರಿನಲ್ಲಿ ಮೂರು ದಿನಗಳ ನಾಯಕತ್ವ ತರಬೇತಿ ಶಿಬಿರದಲ್ಲಿ ಸುರೇಶ್ ಶರ್ಮಾ ಮಾತನಾಡಿ, ಸಾಮಾಜಿಕ ಜಾಲ ತಾಣಗಳ ಮೂಲಕ ರಾಜ್ಯ ಸರ್ಕಾರಸಾಧನೆಗಳನ್ನು ಗುಜರಾತ್ ಚುನಾವಣೆಯಲ್ಲಿ ಬಳಸಿಕೊಂಡು ಮತದಾರರನ್ನು ಸೆಳೆಯುವ ಪ್ರಯತ್ನನಡೆಸಲಾಗಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿರುವುದರಿಂದ ಯುವ ಕಾಂಗ್ರೆಸ್ ಘಟಕ ಜನರಿಗೆ ನೇರವಾಗಿ ಯೋಜನೆಗಳ ಬಗ್ಗೆ ಪ್ರಚಾರ ಮಾಡುವ ಮೂಲಕ ಪಕ್ಷದಲ್ಲಿಯೂ ಗುರುತಿಸಿಕೊಳ್ಳಬಹುದು ಎಂದರು.
ದೊರೆಯುವುದಿಲ್ಲ. ಅದೂ ಕೂಡ ರಾಜಕಾರಣದಲ್ಲಿ ಮುಖ್ಯ ಎಂದು ತಿಳಿಸಿದರು. ರಾಜಕೀಯದಲ್ಲಿ ಕೇವಲ ಆಡಳಿತ ಪಕ್ಷದ ಬಗ್ಗೆ ತಿಳಿದುಕೊಂಡರೆ ಸಾಲದು ಪ್ರತಿಪಕ್ಷಗಳ ಲೆಕ್ಕಾಚಾರವನ್ನೂ ಅರಿತುಕೊಳ್ಳುವುದು ಮುಖ್ಯ. ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ನಿಲುವೇನು ? ಬಿಜೆಪಿಯ ನಿಲುವೇನು ? ಎಂಬುದನ್ನು ತಿಳಿದುಕೊಂಡು ಜನರಿಗೆ ಅರಿವು ಮೂಡಿಸಬೇಕು.ಜನರಿಗೆ ಸರ್ಕಾರದ ಯೋಜನೆಗಳನ್ನು ತಿಳಿಸುವ ಮೊದಲು ಯುವಕರು ತಿಳಿದುಕೊಳ್ಳಬೇಕು ಎಂದರು.
Related Articles
Advertisement
ಮೂರು ದಿನದ ತರಬೇತಿ ನಂತರ ತಿಂಗಳಾಂತ್ಯದಲ್ಲಿ ವಿಭಾಗ ಮಟ್ಟದಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಲ್ಲಿ ಪಾಲ್ಗೊಂಡ ಯುವ ಘಟಕದ ಪದಾಧಿಕಾರಿಗಳು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಯುವಕರಿಗೆ ನಾಯಕತ್ವದ ತರಬೇತಿ ನೀಡಿ, ಅವರ ಮೂಲಕ ಪ್ರತಿ ಬೂತ್ ಮಟ್ಟದಲ್ಲೂ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಪ್ರಯತ್ನವನ್ನು ಈ ತರಬೇತಿ ಮೂಲಕ ನಡೆಸಲಾಗುತ್ತಿದೆ.– ಬಸನಗೌಡ ಬಾದರ್ಲಿ, ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ