Advertisement

ಉಪ್ಪಳಿಗೆ-ಶೇಖಮಲೆ ರಸ್ತೆಗೆ ಗುದ್ದಲಿಪೂಜೆ 

04:21 PM Oct 19, 2017 | |

ಉಪ್ಪಳಿಗೆ: ವಿಧಾನಸಭಾ ಕ್ಷೇತ್ರದ ಉಪ್ಪಳಿಗೆ- ಶೇಖಮಲೆ ರಸ್ತೆ ಅಭಿವೃದ್ಧಿಗೆ ಶಾಸಕಿ ಶಕುಂತಳಾ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು. 50-54ರ ಅಡಿಯಲ್ಲಿ ಲೋಕೋಪಯೋಗಿ ಇಲಾಖೆಯ ‘ಒಂದು ಬಾರಿ ಅಭಿವೃದ್ಧಿ ‘ ಶೀರ್ಷಿಕೆಯಡಿ 2 ಕೋಟಿ ರೂ. ಅನುದಾನ ಮಂಜೂರುಗೊಂಡಿದೆ.

Advertisement

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕಿ ಶಕುಂತಳಾ ಶೆಟ್ಟಿ, ರಸ್ತೆ ಅಭಿವೃದ್ಧಿಯಾಗುವ ಮೂಲಕ ಜನತೆಯ ಬಹುಕಾಲದ ಕನಸು ನನಸಾಗಲಿದೆ. ರಸ್ತೆ ಅಗಲೀಕರಣಕ್ಕೆ ಖಾಸಗಿ ಜಮೀನಿನವರು ಸಹಕರಿಸಿದರೆ ಕೆಲಸಕ್ಕೆ ವೇಗ ಸಿಗಲಿದೆ. ಕ್ಷೇತ್ರದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಆತ್ಮತೃಪ್ತಿ ಇದೆ ಎಂದರು.

ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ
ತಾ.ಪಂ. ಸದಸ್ಯೆ ಮೀನಾಕ್ಷಿ ಮಂಜುನಾಥ್‌ ಮಾತನಾಡಿ, ಹಿಂದೆಯೂ ಈ ಭಾಗದಲ್ಲಿ ಅನುದಾನದ ಲಭ್ಯತೆ ತಕ್ಕಂತೆ ರಿಪೇರಿ, ಅಭಿವೃದ್ಧಿ ಕೆಲಸ ಮಾಡಲಾಗಿತ್ತು. ಈಗ ಶಾಸಕಿ ಶಕುಂತಳಾ ಶೆಟ್ಟಿ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರಿಸಿದ್ದಾರೆ. ಅವರಿಗೆ ಅಭಿನಂದನೆಗಳು ಎಂದರು.

ಬೆಟ್ಟಂಪಾಡಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಉಮಾವತಿ, ಪುಡಾ ಅಧ್ಯಕ್ಷ ಪ್ರಸಾದ್‌ ಕೌಶಲ್‌ ಶೆಟ್ಟಿ, ಎಪಿಎಂಸಿ ಸದಸ್ಯ ಕಾರ್ತಿಕ್‌ ರೈ ಬೆಳ್ಳಿಪ್ಪಾಡಿ, ಬೆಟ್ಟಂಪಾಡಿ ಗ್ರಾ.ಪಂ. ಸದಸ್ಯರಾದ ರಕ್ಷಣ್‌ ರೈ, ಮೊಯಿದು ಕುಂಞಿ, ನಿಡ್ಪಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಅವಿನಾಶ್‌ ರೈ ಕುಡ್ಚಿಲ, ಒಳಮೊಗ್ರು ಗ್ರಾಮ ಪಂಚಾಯತ್‌ ಸದಸ್ಯ ಶಶಿಕಿರಣ್‌ ರೈ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

ತಾ| ಕೆಡಿಪಿ ಸದಸ್ಯ ಕೃಷ್ಣ ಪ್ರಸಾದ್‌ ಆಳ್ವ ಸ್ವಾಗತಿಸಿ, ನಿರೂಪಿಸಿದರು. ಎಂಜಿನಿಯರ್‌ ಗೋಕುಲ್‌ ದಾಸ್‌ ಅವರು ಕಾಮಗಾರಿಯ ಕುರಿತು ಮಾಹಿತಿ ನೀಡಿದರು.

Advertisement

1,000 ಕೋ.ರೂ. ಅನುದಾನ 
ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ಬಡಗನ್ನೂರು ಮಾತನಾಡಿ, ಶಾಸಕಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 1,000 ಕೋಟಿ ರೂ. ಅಭಿವೃದ್ಧಿ ಅನುದಾನ ತರಿಸಿದ್ದಾರೆ. ಕ್ಷೇತ್ರದಲ್ಲಿ ಇದುವರೆಗೆ ಯಾರೂ ಮಾಡದ ಅಭಿವೃದ್ಧಿ ಕೆಲಸವನ್ನು ಅವರು ಮಾಡಿದ್ದಾರೆ. ಇಡೀ ಕರ್ನಾಟಕವೇ ಅನುದಾನ ವಿಚಾರದಲ್ಲಿ ಪುತ್ತೂರು ಕಡೆ ನೋಡುವಂತೆ ಮಾಡಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next