Advertisement

ಉಪನ್ಯಾಸಕರ ಕೊರತೆ: ಬೈಂದೂರು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

07:15 AM Aug 03, 2017 | Team Udayavani |

ಬೈಂದೂರು:ಸ. ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ ಸರಿಪಡಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Advertisement

ಕಳೆದ ಸಾಲಿನಲ್ಲಿ ಕಾರ್ಯನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನು ಈ ವರ್ಷ ಮುಂದುವರೆಸುವ ನಿರ್ಧಾರ ಸರಕಾರ ಇದುವರೆಗೆ ತೆಗೆದುಕೊಂಡಿಲ್ಲ. ಪರೀಕ್ಷೆ ಹತ್ತಿರ ಬಂದರು ಸಹ ಉಪನ್ಯಾಸಕರು ಇಲ್ಲದಿರುವುದು ವಿದ್ಯಾರ್ಥಿಗಳ ಭವಿಷ್ಯವನ್ನು ಡೋಲಾಯಮಾನವಾಗಿಸಿದೆ. ಈ ಸಮಸ್ಯೆ ಸರಿಪಡಿಸ ಬೇಕೆಂದು ಆಗ್ರಹಿಸಿ ತಹಶೀಲ್ದಾರರ ಕಚೇರಿಗೆ ತೆರಳಿ ಮನವಿ ನೀಡಿದರು.  ಬೈಂದೂರು ವಿಶೇಷ ತಹಶೀಲ್ದಾರ್‌ ಕಿರಣ್‌ ಗೌರಯ್ಯ ಮನವಿ ಸ್ವೀಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next