Advertisement

“ಹಲೋ ಸಿಎಂ ಸಾಹೇಬ್ರೆ ಫ್ರೀ ಇದ್ದೀರಾ” ಎಂದ ಉಪನ್ಯಾಸಕನ ವಿರುದ್ದ ಶಿಸ್ತು ಕ್ರಮ

08:08 AM May 01, 2020 | keerthan |

ಚಿಕ್ಕಮಗಳೂರು: ಕೋವಿಡ್-19 ವಾರಿಯರ್ಸ್ ಮುಖ್ಯಮಂತ್ರಿಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಮಂಜುನಾಥ್ ಅವರನ್ನು ಶಿಕ್ಷಣ ಇಲಾಖೆ ಅಮಾನತ್ತು ಮಾಡಿ ಶಿಸ್ತು ಕ್ರಮಕ್ಕೆ ಆದೇಶ ನೀಡಿದೆ.

Advertisement

ಉಪನ್ಯಾಸಕ ಬಿ.ಎಸ್ ಮಂಜುನಾಥ್ ಅವರು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕರಾಗಿದ್ದು, ಇತ್ತೀಚೆಗೆ “ಹಲೋ ಸಿಎಂ ಸಾಹೇಬ್ರೆ ಫ್ರೀ ಇದ್ದೀರಾ..! ಕೋವಿಡ್-19  ಪರಿಹಾರಕ್ಕೆ ಜನರ ಹತ್ತಿರ ದುಡ್ಡು ಕೇಳ್ತಿದ್ದೀರಿ, ದುಡ್ಡು ಎಲ್ಲಿದೆ ಅಂತ ಲಿಸ್ಟ್ ಇಲ್ಲಿದೆ ನೋಡಿ..! ಎಂದು ಆಡಿಯೋ ತುಣುಕೊಂದನ್ನು ಹರಿಬಿಟ್ಟಿದ್ದರು.

ಮುಖ್ಯಮಂತ್ರಿಗಳ ವಿರುದ್ಧದ ಈ ಆಡಿಯೋ ಕ್ಲಿಪ್ ಪೋಸ್ಟ್ ಎಲ್ಲೆಡೆ ವೈರಲ್ ಆಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಹಿನ್ನೆಲೆ ಉಪನ್ಯಾಸಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಉಪನ್ಯಾಸಕ ಮಂಜುನಾಥ್ ಅವರನ್ನು ಅಮಾನತ್ತುಗೊಳಿಸಿ ಶಿಸ್ತುಕ್ರಮಕ್ಕೆ ಆದೇಶ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next