Advertisement

ವಿಜಯಪುರ : ಕೋವಿಡ್ 2ನೇ ಅಲೆಗೆ ಮಹಿಳಾ ಪಿಎಸ್‌ಐ ಸಾವು

09:16 PM May 10, 2021 | sudhir |

ವಿಜಯಪುರ : ಕೊರೊನಾ 2ನೇ ಅಲೆಗೆ ಕರ್ತವ್ಯನಿರತ ಮಹಿಳಾ ಪಿಎಸ್‌ಐಯೊಬ್ಬರು ಸಾವನ್ನಪ್ಪಿದ ಘಟನೆ ಸೋಮವಾರ ನಗರದಲ್ಲಿ ನಡೆದಿದೆ.

Advertisement

ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ವೇಳೆ ಬಂದೋಬಸ್ತಗೆ ನಿಯೋಜನೆಗೊಂಡಿದ್ದ ಇಲ್ಲಿನ ಆದರ್ಶನಗರ ಪೊಲೀಸ್ ಠಾಣೆಯ ಪಿಎಸ್‌ಐ ಸುಲೋಚನಾ ಭಜಂತ್ರಿ, ಅಲ್ಲಿಂದ ಮರಳಿದ ಬಳಿಕ ಆರೋಗ್ಯದಲ್ಲಿ ಏರುಪೇರಾಗಿತ್ತು. ಉಪಚಾರ ಪಡೆದು, ಕರ್ತವ್ಯಕ್ಕೆ ಹಾಜರಾಗಿದ್ದ ಅವರಿಗೆ ಸೋಮವಾರ ಬೆಳಗ್ಗೆ ಉಸಿರಾಟದಲ್ಲಿ ತೀವ್ರ ತೊಂದರೆ ಕಂಡು ಬಂದಿತ್ತು. ಹೀಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರು ಪತಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಬಂಧು, ಬಳಗವನ್ನು ಅಗಲಿದ್ದಾರೆ. ಆದರ್ಶ ನಗರ ಪೊಲೀಸ್ ಠಾಣೆ ಮಹಿಳಾ ಪಿಎಸ್ ಐ ಸುಲೋಚನಾ ಭಜಂತ್ರಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾಗ ಕೋವಿಡ್- 19 ಸೋಂಕಿಗೆ ಸಾವಿಗೀಡಾಗಿರುವುದು ನೋವಿನ ಸಂಗತಿ. ಮೃತರ ಆತ್ಮಕ್ಕೆ ಭಗವಂತ ಶಾಂತಿ ಕರುಣಿಸಲಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಮಪ ಅಗರವಾಲ್ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ :3ನೇ ಅಲೆ ಎದುರಿಸಲು ಹಳ್ಳಿ ಹಂತದಲ್ಲೇ 8,105 ಆಕ್ಸಿಜನ್‌ ಬೆಡ್‌ ವ್ಯವಸ್ಥೆಗೆ ಸರಕಾರ ನಿರ್ಧಾರ

Advertisement

Udayavani is now on Telegram. Click here to join our channel and stay updated with the latest news.

Next