Advertisement

“ಮಹಾ” ಸಚಿವ ಸಂಪುಟ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ; ಕಾಂಗ್ರೆಸ್ ನಾಯಕರಿಂದ ಖರ್ಗೆ ಭೇಟಿ

09:45 AM Jan 01, 2020 | Team Udayavani |

ಮುಂಬೈ: ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ಮುಖಂಡರಾದ ಪ್ರಥ್ವಿರಾಜ್ ಚವಾಣ್ ಸೇರಿದಂತೆ ಹಲವು ಮುಖಂಡರು ಅಸಮಾಧಾನವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ, ಎನ್ ಸಿಪಿಯ ಅಜಿತ್ ಪವಾರ್ ಹಾಗೂ ಶಿವಸೇನಾ, ಎನ್ ಸಿಪಿ ಮತ್ತು ಕಾಂಗ್ರೆಸ್ ನ 34 ಮಂದಿ ಸಚಿವರಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದರು.

Advertisement

ಸಚಿವ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಹಿರಿಯ ಮುಖಂಡರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದ್ದಾರೆ. ಚವಾಣ್, ನಸೀಮ್ ಖಾನ್, ಪ್ರಣಿತಿ ಶಿಂಧೆ, ಸಂಗ್ರಾಮ್ ತೋಪ್ಡೆ, ಅಮಿನ್ ಪಟೇಲ್ ಮತ್ತು ರೋಹಿದಾಸ್ ಪಾಟೀಲ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿಯಾಗಿ ಅಸಮಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿ ವಿವರಿಸಿದೆ.

ಸೋಮವಾರ ಕಾಂಗ್ರೆಸ್ ಮುಖಂಡರಾದ ಅಶೋಕ್ ಚವಾಣ್, ದಿಲಿಪ್ ವಾಲ್ಸೆ-ಪಾಟೀಲ್, ಧನಂಜಯ್ ಮುಂಡೆ, ಸುನೀಲ್ ಚಾತ್ರಪಾಲ್ ಕೇದಾರ್ ಮತ್ತು ಕೆಸಿ ಪಾಡ್ವಿ ಮಹಾರಾಷ್ಟ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಸಚಿವರಿಗೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ. ಇನ್ನು ಎರಡು ಮೂರು ದಿನಗಳಲ್ಲಿ ಖಾತೆ ಹಂಚಿಕೆಯಾಗಬಹುದು ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next