Advertisement

ಕಂಗನಾ ರಾಣಾವತ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು: ಪಾಟೀಲ್

06:51 PM Feb 08, 2021 | Team Udayavani |

ಬೆಳಗಾವಿ: ರೈತರನ್ನು ಭಯೋತ್ಪಾದಕರು ಎಂದು ಟೀಕಿಸಿರುವ ಚಿತ್ರ ನಟಿ ಕಂಗನಾ ರಾಣಾವತ್ ವಿರುದ್ಧ ಬೆಳಗಾವಿಯ ವಕೀಲ ಹರ್ಷವರ್ಧನ ಪಾಟೀಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Advertisement

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಫೆ.6 ರಂದು ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದರು.

ಕಂಗನಾ ರಾಣಾವತ್ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು. ಅಲ್ಲದೇ ಅವರ ಟ್ವಿಟರ್ ಖಾತೆ ರದ್ದು ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ:ಉತ್ತರಾಖಂಡ ನೀರ್ಗಲ್ಲು ಸ್ಫೋಟ; 200 ಮಂದಿ ಜಲಸಮಾಧಿ? ಕೊಚ್ಚಿ ಹೋದ ರಸ್ತೆ, ಸೇತುವೆ

ದೇಶದಲ್ಲಿ ಪ್ರತಿಯೊಬ್ಬರಿಗೂ ಮಾತನಾಡುವ ಸ್ವಾತಂತ್ರ್ಯ ಇದೆ. ಆದರೆ ಅದು ದುರುಪಯೋಗ ಆಗಬಾರದು.  ಕೇಂದ್ರ ದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ರೈತರು ನಿರಂತರ ಹೋರಾಟ ಮಾಡುತ್ತಿದ್ದಾರೆ. ಹೀಗಿರುವಾಗ ಅವರನ್ನು ರೈತರಲ್ಲ. ದೇಶವನ್ನು ಒಡೆಯುವ ಭಯೋತ್ಪಾದಕರು ಎಂದು ಟೀಕೆ ಮಾಡಿರುವುದು ಖಂಡನೀಯ ಎಂದು ಹರ್ಷವರ್ಧನ ಪಾಟೀಲ್ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next