Advertisement

ನೆಗಡಿ –ಕೆಮ್ಮು, ಜ್ವರಕ್ಕೆ ತಪಾಸಣೆ ಕಡ್ಡಾಯ: ತಪಾಸಣೆ ಮಾಡಿಸಿಕೊಳ್ಳದಿದ್ದರೆ ಕಾನೂನು ಕ್ರಮ

10:08 AM Mar 16, 2020 | sudhir |

ಕಲಬುರಗಿ: ಕೊರೊನಾ ಸೋಂಕಿನ ಕುರಿತ ವದಂತಿಗಳಿಗೆ ಜನತೆ ಕಿವಿಗೊಡಬಾರದು. ಮುನ್ನೆಚ್ಚರಿಕೆ ಕ್ರಮವಾಗಿ ನೆಗಡಿ, ಕೆಮ್ಮು ಮತ್ತು ಜ್ವರದಿಂದ ಬಳಲುತ್ತಿರುವವರು ಕಡ್ಡಾಯವಾಗಿ ತಪಾಸಣೆ ಮಾಡಿಸಿಕೊಳ್ಳಲೇಬೇಕು. ಯಾರು ತಪಾಸಣೆಗೆ ಒಳಗಾಗುವುದಿಲ್ಲವೋ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

Advertisement

ನಗರದ ಜಿಮ್ಸ್‌ ಆಸ್ಪತ್ರೆ ಹಾಗೂ ಇಎಸ್‌ಐ ಆಸ್ಪತ್ರೆಯಲ್ಲಿ ಭಾನುವಾರ ಕೊರೊನಾ ಸೋಂಕಿತರು ಮತ್ತು ಶಂಕಿತರ ಚಿಕಿತ್ಸೆಗೆ ಕೈಗೊಂಡ ಕ್ರಮ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕೊರೊನಾ ಸೋಂಕು ಬಂದ ತಕ್ಷಣ ಅನಾಹುತವಾಗುವುದಿಲ್ಲ. ಯಾರೂ ಹೆದರಬಾರದು. ಚಿಕಿತ್ಸೆಗೆ ಬೇಕಾದಂತಹ ಎಲ್ಲಾ ವ್ಯವಸ್ಥೆಯನ್ನು ಆರೋಗ್ಯ ಇಲಾಖೆ ಮಾಡಿಕೊಂಡಿದೆ ಎಂದರು.

ಕೊರೊನಾ ಸೋಂಕಿಗೆ ಕಲಬುರಗಿ ವ್ಯಕ್ತಿಯೊಬ್ಬರು ಮೃತಪಟ್ಟ ಬಳಿಕ ಅವರ ಮನೆ ಸುತ್ತ-ಮುತ್ತ ಐದು ಕಿ.ಮೀ. ಪ್ರದೇಶವನ್ನು ಬಫರ್‌ ಝೋನ್‌ ಎಂದು ಗುರುತಿಸಲಾಗಿದೆ. ಆ ಪ್ರದೇಶದಿಂದ ಜನರು ಹೊರಬಾರದಂತೆ ನೋಡಿಕೊಳ್ಳಲಾಗುತ್ತಿದೆ. ಅವರ ಮನೆಗಳಿಗೆ ಆಹಾರದ ಕಿಟ್‌ ಸೇರಿದಂತೆ ಬೇಕಾದ ವ್ಯವಸ್ಥೆ ಮಾಡಿಕೊಡಲಾಗಿದೆ. ವಿವಿಧ ದೇಶಗಳಿಂದ ಕಲಬುರಗಿಗೆ 16 ಜನ ಬಂದಿದ್ದಾರೆ. ಅವರನ್ನೂ ಮನೆಯಲ್ಲೇ ಇಟ್ಟು ನಿಗಾ ವಹಿಸಲಾಗುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next