Advertisement

Legislative council bypolls: ಒಬಿಸಿ ಸಮುದಾಯದ ಗೆಲುವು; ಜೆ.ಪಿ.ನಡ್ಡಾ

08:33 AM Oct 25, 2024 | Team Udayavani |

ಮಂಗಳೂರು: ಹಿಂದುಳಿದ ಸಮುದಾಯದ ಸುಧಾರಣೆ, ಸಶಕ್ತೀ ಕರಣಕ್ಕೆ ಬಿಜೆಪಿ ಸದಾ ಬದ್ಧವಾಗಿರುತ್ತದೆ. ವಿಧಾನ ಪರಿಷತ್‌ಗೆ ಚುನಾಯಿತರಾದ ಕಿಶೋರ್‌ ಕುಮಾರ್‌ ಪುತ್ತೂರು ಗೆಲುವು ಈ ನಿಟ್ಟಿನಲ್ಲಿ ಸಂದೇಶ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Advertisement

ತಳಮಟ್ಟದ ನಾಯಕರನ್ನು ಸಶಕ್ತಗೊಳಿಸುವ ಹಾಗೂ ಒಬಿಸಿ ಸಹಿತ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸುವ ನಮ್ಮ ಬದ್ಧತೆಗೆ ಈ ಗೆಲುವು ನಿದರ್ಶನ ಎಂದಿದ್ದಾರೆ.

ಯುವ ನಾಯಕ ಕಿಶೋರ್‌ ಕುಮಾರ್‌ ನಿರೀಕ್ಷೆಯಂತೆ ಗೆಲುವು ದಾಖಲಿಸಿದ್ದು, ಬಿಜೆಪಿ ಕಾರ್ಯಕರ್ತರಿಗೆ ಹೊಸ ಉತ್ಸಾಹ ಮೂಡಿದೆ. ಕರಾವಳಿ ಬಿಜೆಪಿಯ ಭದ್ರಕೋಟೆ ಎನ್ನುವುದು ಈ ಫಲಿತಾಂಶದಿಂದ ಮತ್ತೆ ದೃಢವಾಗಿದೆ. ಕಿಶೋರ್‌ ಕುಮಾರ್‌ ಮೇಲ್ಮನೆಯಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳನ್ನು ಸಮರ್ಥವಾಗಿ ಪ್ರತಿನಿಧಿ ಸಲಿದ್ದಾರೆ.
– ನಳಿನ್‌ ಕುಮಾರ್‌ ಕಟೀಲ್‌, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ

Advertisement

Udayavani is now on Telegram. Click here to join our channel and stay updated with the latest news.

Next