Advertisement

ಪರಿಷತ್ ಉಪಸಭಾಪತಿ ಚುನಾವಣೆ: BJPಯಿಂದ ಪ್ರಾಣೇಶ್, ಕಾಂಗ್ರೆಸ್ ನಿಂದ ಕೆ.ಸಿ.ಕೊಂಡಯ್ಯ ಸ್ಪರ್ಧೆ

10:45 AM Jan 28, 2021 | Team Udayavani |

ಬೆಂಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಹುದ್ದೆಗೆ ಚುನಾವಣೆ ನಡೆಯಲಿದ್ದು, ಬಿಜೆಪಿ ಪಕ್ಷದಿಂದ ಪ್ರಾಣೇಶ್ ಮತ್ತು ಕಾಂಗ್ರೆಸ್ ನಿಂದ ಕೆ.ಸಿ.ಕೊಂಡಯ್ಯ ಸ್ಪರ್ಧೆ ಮಾಡಲಿದ್ದಾರೆ.

Advertisement

ಪ್ರಾಣೇಶ್ ಅವರು ಇಂದು ಬೆಳಗ್ಗೆ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

ಇದನ್ನೂ ಓದಿ:ಸಚಿವರುಗಳ ಸಹಾನುಭೂತಿ ಬೇಕಿಲ್ಲ: ಮಿತ್ರಮಂಡಳಿಗೆ ವಿಶ್ವನಾಥ್ ಟಾಂಗ್

ನಾಮಪತ್ರ ಸಲ್ಲಿಕೆ ವೇಳೆ ಡಿಸಿಎಂ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್ ಸೇರಿದಂತೆ ಬಿಜೆಪಿ ಹಿರಿಯ ಪರಿಷತ್ ಸದಸ್ಯರು ಭಾಗಿಯಾಗಿದ್ದರು. ಈ ವೇಳೆ ಜೆಡಿಎಸ್ ನ ಅಪ್ಪಾಜಿ ಗೌಡ ಮಾತ್ರ ಭಾಗಿಯಾಗಿದ್ದರು.

ಪರಿಷತ್ ಉಪ ಸಭಾಪತಿಯಾಗಿದ್ದ ಧರ್ಮೇಗೌಡ ಅವರ ನಿಧನದಿಂದ ಸ್ಥಾನ ತೆರವಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next