Advertisement

ಕ್ವಾರಂಟೈನ್‌ ಕೇಂದ್ರಗಳಿಗೆ ಶಾಸಕ ಸುಕುಮಾರ್‌ ಶೆಟ್ಟಿ ಭೇಟಿ

09:56 PM May 16, 2020 | Sriram |

ಕುಂದಾಪುರ: ಸರಕಾರಿ ಕ್ವಾರಂಟೈನ್‌ ಕೇಂದ್ರಗಳಲ್ಲಿ ಕೆಲ ಮೂಲಸೌಕರ್ಯಗಳಿಲ್ಲ ಎನ್ನುವ ದೂರುಗಳು ಬಂದ ಹಿನ್ನೆಲೆಯಲ್ಲಿ ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿಯವರು ಕೆಲ ಕ್ವಾರಂಟೈನ್‌ ಕೇಂದ್ರಗಳಿಗೆ ಸ್ವತಃ ಭೇಟಿ ನೀಡಿ, ಅಲ್ಲಿ ಮಾಡಲಾದ ವ್ಯವಸ್ಥೆಗಳನ್ನು ಪರಿಶೀಲಿಸಿದರು.

Advertisement

ವಿದೇಶ, ಹೊರ ರಾಜ್ಯದಿಂದ ಬಂದಂತಹ ಬೈಂದೂರು ತಾಲೂಕು ವ್ಯಾಪ್ತಿಯ ಜನರನ್ನು ಬೇರೆ ಬೇರೆ ಕಡೆಗಳಲ್ಲಿ ಸರಕಾರಿ ಕ್ವಾರಂಟೈನ್‌ ಮಾಡಲಾಗಿದೆ. ಶುಕ್ರವಾರ ಸಂಜೆ ಭೇಟಿ ನೀಡಿದ ಶಾಸಕರು ಕ್ವಾರಂಟೈನ್‌ನಲ್ಲಿರುವ ಕೆಲ ಜನರೊಂದಿಗೆ ಮಾತನಾಡಿ, ಊಟ, ನೀರು ಇತ್ಯಾದಿ ವ್ಯವಸ್ಥೆಗಳ ಕುರಿತಂತೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಅಧಿಕಾರಿಗಳು, ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಅಧಿಕಾರಿಗಳಿಗೆ ಸೂಚನೆ
ಹೊರಗಿನಿಂದ ಬರುವವರಿಗೆ ಉತ್ತಮ ವಸತಿ, ಆಹಾರದ ವ್ಯವಸ್ಥೆ ಮಾಡಬೇಕು. ಯಾವುದೇ ಕೊರತೆಯಾಗದಂತೆ ಆಯಾಯ ಪಂಚಾಯತ್‌ ಮಟ್ಟದಲ್ಲಿ ಕ್ರಮಕೈಗೊಳ್ಳಬೇಕು ಎಂದು ಇದೇ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next