Advertisement

ಚಿರತೆಗಳ ದಾಳಿಗೆ 14 ಕುರಿಗಳ ಸಾವು : ಗ್ರಾಮಸ್ಥರಿಗೆ ಧೈರ್ಯ ತುಂಬಿದ ಉಪವಿಭಾಗಾಧಿಕಾರಿ

03:23 PM Mar 17, 2022 | Team Udayavani |

ಚಿಕ್ಕಬಳ್ಳಾಪುರ: ಗುಡಿಬಂಡೆ ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಎಲ್ಲೋಡು ಗ್ರಾಮದ ನಿವಾಸಿ ಶಿವಾರೆಡ್ಡಿ ಬಿನ್ ಬಾವಣ್ಣ ಎಂಬುವವರ ಕುರಿದೊಡ್ಡಿ ಮೇಲೆ  ಗುರುವಾರ ಬೆಳಿಗ್ಗೆ ಸುಮಾರು 2 ಗಂಟೆ ವೇಳೆಯಲ್ಲಿ ಹಠಾತ್ ಎರಡು ಚಿರತೆಗಳು ಕುರಿದೊಡ್ಡಿಯಲ್ಲಿದ್ದ 17 ಕುರಿಗಳ ಮೇಲೆ ದಾಳಿ ನಡೆಸಿವೆ. ಈ ಪೈಕಿ 14 ಕುರಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನುಳಿದ 3 ಕುರಿಗಳು ತೀವ್ರವಾಗಿ ಗಾಯಗೊಂಡಿರುತ್ತವೆ.

Advertisement

ಉಪವಿಭಾಗಾಧಿಕಾರಿ ಡಾ.ಸಂತೋಷ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಚಿರತೆಗಳನ್ನು ಹಿಡಿಯಲು ಅರಣ್ಯ ಇಲಾಖೆಯವರು ಎಲ್ಲಾ ವ್ಯವಸ್ಥೆ ಮಾಡಿದ್ದಾರೆ, ಗ್ರಾಮಸ್ಥರು ಯಾರು ಹೆಚ್ಚಿನ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಗ್ರಾಮಸ್ಥರಿಗೆ ಧೈರ್ಯ ತುಂಬಿದರು. ಚಿರತೆ ದಾಳಿಯಿಂದ ಕುರಿಗಳನ್ನು ಕಳೆದುಕೊಂಡ ಸಂತ್ರಸ್ತ ಮಾಲಿಕನಿಗೆ ಪರಿಹಾರ ನೀಡಲು ಅಗತ್ಯ ಕ್ರಮ ತೆಗೆದು ಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಉಕ್ರೇನ್ ನಿಂದ ವಾಪಸ್ಸಾಗಿರುವ ವಿದ್ಯಾರ್ಥಿಗಳಿಗೆ ನವೀನ್ ಹೆಸರಿನಲ್ಲಿ ನೆರವು : ರಕ್ಷಾ ರಾಮಯ್ಯ

Advertisement

Udayavani is now on Telegram. Click here to join our channel and stay updated with the latest news.

Next