Advertisement

ಸುಬ್ರಹ್ಮಣ್ಯ: ಬಳ್ಪ ಗ್ರಾಮದಲ್ಲಿ ಚಿರತೆ ದಾಳಿ -ವ್ಯಕ್ತಿ ಗಂಭೀರ

10:00 AM Jan 03, 2020 | sudhir |

ಸುಬ್ರಹ್ಮಣ್ಯ :ಕಡಬ ತಾಲೂಕಿನ ಬಳ್ಪ ಗ್ರಾಮದ ಕಾಯರ ನಿವಾಸಿ ಕ್ರಷಿಕ ಬಾಲಕ್ರಷ್ಣ ಎಂಬವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಗುರುವಾರ ನಡೆದಿದೆ.

Advertisement

ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಗಾಯಾಳುವಿಗೆ ಸ್ಥಳಿಯವಾಗಿ ಚಿಕಿತ್ಸೆ ನೀಡಿದ ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ.

ಘಟನೆ ಗುರುವಾರ ಹಗಲು ಹೊತ್ತಲ್ಲಿ ನಡೆದಿದ್ದು ಕೃಷಿಕ ಬಾಲಕೃಷ್ಣ ಅವರು ಹುಲ್ಲು ತರಲೆಂದು ತೋಟಕ್ಕೆ ತೆರಳಿದ ವೇಳೆ ಈ ಘಟನೆ ಸಂಭವಿಸಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬಂದಿದ್ದು ಬೋನಿಟ್ಟು ಚಿರತೆಯನ್ನು ಹಿಡಿಯುವ ಕಾರ್ಯಾಚರಣೆ ಆರಂಬಿಸಿದ್ದಾರೆ.ಸ್ಥಳಿಯರ ಭೀತಿಗು ಈ ಘಟನೆ ಕಾರಣವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next