Advertisement

Tirumala: ತಿರುಮಲದಲ್ಲಿ ಚಿರತೆ ದಾಳಿ; ಬಾಲಕಿ ಸಾವು

09:39 PM Aug 12, 2023 | Team Udayavani |

ಹೈದರಾಬಾದ್‌: ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯ ಪ್ರಸಿದ್ಧ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಕಾಲ್ನಡಿಗೆ ಮೂಲಕ ತೆರಳುತ್ತಿದ್ದ ಆರು ವರ್ಷದ ಬಾಲಕಿಯೊಬ್ಬಳು ಚಿರತೆ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದಾಳೆ.

Advertisement

ಮೃತ ಬಾಲಕಿಯನ್ನು ಲಕ್ಷಿತಾ (6) ಎಂದು ಗುರುತಿಸಲಾಗಿದೆ. ನೆಲ್ಲೂರು ಮೂಲದ ಲಕ್ಷಿತಾ ತನ್ನ ಹೆತ್ತವರೊಂದಿಗೆ ತಿಮ್ಮಪ್ಪನ ದರ್ಶನಕ್ಕೆಂದು ಬಂದಿದ್ದಳು. ತಿರುಮಲಕ್ಕೆ ಕಾಲ್ನಡಿಗೆ ಮೂಲಕ ಹೊರಟಿದ್ದರು. ಶುಕ್ರವಾರ ರಾತ್ರಿ 7.30ರಿಂದ 8ರ ವೇಳೆಗೆ ಲಕ್ಷಿತಾ ಹೆತ್ತವರಿಗಿಂತ ಮುಂದೆ ನಡೆಯುತ್ತ ಸಾಗಿದ್ದಳು. ಸ್ವಲ್ಪ ಹೊತ್ತಿನ ಬಳಿಕ ಬಾಲಕಿ ಕಣ್ಮರೆಯಾದ ಕಾರಣ ಆತಂಕಕ್ಕೊಳಗಾದ ಹೆತ್ತವರು ಹುಡುಕಾಟ ಆರಂಭಿಸಿದ್ದರು. ಕೊನೆಗೆ ಟಿಟಿಡಿ ಜಾಗೃತ ದಳ ಮತ್ತು ಭದ್ರತ ಸಿಬಂದಿ, ಸ್ಥಳೀಯ ಪೊಲೀಸರು, ಅರಣ್ಯ ಇಲಾಖೆ ಸಿಬಂದಿ ಶೋಧ ಕಾರ್ಯದಲ್ಲಿ ಭಾಗಿಯಾಗಿದ್ದು, ಬೆಳಗಿನ ಜಾವ 4 ಗಂಟೆಗೆ ನರಸಿಂಹ ಸ್ವಾಮಿ ದೇಗುಲದ ಸಮೀಪದಲ್ಲಿ ಮೃತದೇಹ ಪತ್ತೆಯಾಗಿದೆ. ದೇಹದಲ್ಲಿ ಪ್ರಾಣಿ ದಾಳಿಯ ಗಾಯದ ಗುರುತುಗಳು ಕಂಡುಬಂದಿವೆ.

Advertisement

Udayavani is now on Telegram. Click here to join our channel and stay updated with the latest news.

Next