Advertisement

ಕುರಿ ಹಟ್ಟಿಯ ಮೇಲೆ ಚಿರತೆ ದಾಳಿ ಶಂಕೆ: 19 ಕುರಿಗಳ ಸಾವು!

02:29 PM May 20, 2022 | Team Udayavani |

ಹಾವೇರಿ: ರೈತರೊಬ್ಬರ ಹಟ್ಟಿಯಲ್ಲಿದ್ದ 19 ಕುರಿಗಳು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಮುದೆನೂರು ಗ್ರಾಮದಲ್ಲಿ ನಡೆದಿದೆ. ಕುರಿಗಳ ಸಾವಿಗೆ ಚಿರತೆ ದಾಳಿ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

Advertisement

ಫಕ್ಕೀರಪ್ಪ ಮಳನಾಯಕನಹಳ್ಳಿ ಎಂಬುವವರಿಗೆ ಸೇರಿದ ಕುರಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತ ಫಾರಂ ಕಡೆ ಬಾರದೆ ಮನೆಯಲ್ಲಿ ಇದ್ದಾಗ ಘಟನೆ ನಡೆದಿದೆ.

ಒಂದು ಅಥವಾ ಎರಡು ಚಿರತೆಗಳು ಸೇರಿ ದಾಳಿ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸುಮಾರು ಮೂರು ಲಕ್ಷ ರೂ. ಮೌಲ್ಯದ ಕುರಿಗಳು ಸಾವನ್ನಪ್ಪಿದೆ.

ಸ್ಥಳಕ್ಕೆ ಹಲಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next