Advertisement

Hunsur: ಚಿರತೆ ದಾಳಿ; ಯುವಕನಿಗೆ ಗಾಯ

09:01 AM Jul 15, 2023 | Team Udayavani |

ಹುಣಸೂರು: ಚಿರತೆ ದಾಳಿ ನಡೆಸಿ ಯುವಕನೊರ್ವನನ್ನು ಗಾಯಗೊಳಿಸಿರುವ ಘಟನೆ ತಾಲೂಕಿನ ರಾಮೇನಹಳ್ಳಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.

Advertisement

ನಗರಕ್ಕೆ ಸಮೀಪದ ಹನಗೋಡು ರಸ್ತೆಯ ರಾಮೇನಹಳ್ಳಿ ಬೆಟ್ಟದ ತಪ್ಪಲಿನ ಜಾತ್ರೆ ಮಾಳದ ಮಂಟಪದ ಬಳಿ ಸ್ನೇಹಿತರೊಂದಿಗೆ ಕುಳಿತಿದ್ದ ವೇಳೆ ಬೆಟ್ಟದ ಕಡೆಯಿಂದ ಬಂದ ಚಿರತೆ ಯುವಕನ ಮೇಲೆ ದಾಳಿ ನಡೆಸಿದೆ.

ಈ ಪರಿಣಾಮ ಯುವಕನ ಮಂಡಿ ಹಾಗೂ ಭುಜಕ್ಕೆ ಪೆಟ್ಟಾಗಿದ್ದು, ವಿಷಯ ತಿಳಿದ ಗ್ರಾಮಸ್ಥರು ತಕ್ಷಣವೇ ಹುಣಸೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳು ಅನಿಲ್‌ಗೆ  ಭುಜದ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆಂದು ಆರ್.ಎಫ್.ಓ.ನಂದಕುಮಾರ್ ಉದಯವಾಣಿಗೆ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next