Advertisement

ಬಳ್ಳಾರಿ : ಚಿರತೆ ದಾಳಿಗೆ ಜಾನುವಾರು ಮೇಯಿಸುತ್ತಿದ್ದ ಯುವಕ ಬಲಿ 

04:10 PM Jul 11, 2018 | |

ಸಂಡೂರು: ತಾಲೂಕಿನ ಬಾವಳ್ಳಿಯಲ್ಲಿ ಚಿರತೆ ಹಾವಳಿ ಮಿತಿ ಮೀರಿದ್ದು ಬುಧವಾರ ಜಾನುವಾರು ಮೇಯಿಸುತ್ತಿದ್ದ 25 ವರ್ಷದ ಯುವಕನೊಬ್ಬ ಚಿರತೆ ದಾಳಿಗೆ ಸಾವನ್ನಪ್ಪಿದ್ದಾನೆ. 

Advertisement

25 ವರ್ಷದ ಶಂಕರ್‌ ನಾಯ್ಕ್‌ ಎನ್ನುವ ಯುವಕ ಚಿರತೆ ದಾಳಿಗೆ ಬಲಿಯಾದ ಯುವಕ. 

ಸ್ಥಳಕ್ಕೆ ಅರಣ್ಯಾಧಿಕಾರಿಗಳು ,ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. 

ಕಳೆದ ವರ್ಷ ಇದೇ ಅರಣ್ಯ ವ್ಯಾಪ್ತಿಯಲ್ಲಿ ಮೂವರು ಚಿರತೆ ದಾಳಿಗೆ ಬಲಿಯಾಗಿದ್ದರು ಎಂದು ತಿಳಿದು ಬಂದಿದೆ. 

ಸಂಡೂರಿನ ಅರಣ್ಯ ಪ್ರದೇಶದಲ್ಲಿ ಹಲವು ಚಿರತೆಗಳಿದ್ದು  ಗ್ರಾಮಸ್ಥರಿಗೆ ಆತಂಕ ಮೂಡಿಸಿದ್ದು, ಸೂಕ್ತ ರಕ್ಷಣೆ ನೀಡಬೇಕು ಎಂದು  ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next