Advertisement

Shivamogga; ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಚಿರತೆ ದಾಳಿ: ಮಹಿಳೆ ಸಾವು

07:55 PM Aug 08, 2023 | Team Udayavani |

ಶಿವಮೊಗ್ಗ: ತಾಲ್ಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ರೈತ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿದ್ದು ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

Advertisement

ಬಿಕ್ಕೋನಹಳ್ಳಿ ಗ್ರಾಮದ ಯಶೋದಮ್ಮ (45)ಹೊಲಕ್ಕೆ ಹೋದಾಗ ಏಕಾಏಕಿ ಚಿರತೆ ದಾಳಿ ಮಾಡಿ ಸುಮಾರು ದೂರ ಎಳೆದು ಕೊಂಡು ಹೋಗಿ ಕುತ್ತಿಗೆ ಹಾಗೂ ಬೆನ್ನಿನ ಭಾಗವನ್ನು ತಿಂದು ಬಿಟ್ಟು ಹೋದ ಘಟನೆ ನಡೆದಿದೆ. ಇದರಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ಮೂಡಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next