Advertisement

ಮನೆಯ ಜಗುಲಿಯಲ್ಲಿ ಮಲಗಿದ್ದ ವೃದ್ಧೆಯ ಮೇಲೆ ಚಿರತೆ ದಾಳಿ

08:27 AM May 17, 2020 | keerthan |

ರಾಮನಗರ: ಮನೆಯ ಮುಂದಿನ ಜಗುಲಿಯ ಮೇಲೆ ಮಲಗಿದ್ದ ವೃದ್ದೆಯ ಮೇಲೆ ಚಿರತೆಯೊಂದು ದಾಳಿ ಮಾಡಿದ್ದು, ಮಹಿಳೆ ಸಾವನ್ನಪ್ಪಿದ ಘಟನೆ ಶನಿವಾರ ಮುಂಜಾನೆ ನಡೆದಿದೆ.

Advertisement

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರು ಹೋಬಳಿ ಮೋಟಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊತ್ತಗಾನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗಂಗಮ್ಮ(68) ಚಿರತೆ ದಾಳಿಗೆ ಬಲಿಯಾದ ವೃದ್ದೆ.

ದಾಳಿಯ ಕ್ರೂರತೆಗೆ ವೃದ್ದೆಯ ರುಂಡ, ಮುಂಡ ಬೇರೆಯಾಗಿದೆ. ಮುಖವನ್ನು ಚಿರತೆ ತಿಂದು ಹಾಕಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ದೌಡಾಯಿಸಿದ್ದು, ಪರಿಶೀಲನೆ ಆರಂಭಿಸಿದ್ದಾರೆ. ಕೆಲವು ದಿನಗಳ ಹಿಂದೆ ಹಿಂದೆಯಷ್ಟೇ ದನಗಾಹಿಗಳನ್ನು ಚಿರತೆ ಅಟ್ಟಾಡಿಸಿದೆ ಎಂದು ಗೊತ್ತಾಗಿದೆ.

ಮಗು ತಿಂದಿದ್ದ ಚಿರತೆ
ಕಳೆದ ಶನಿವಾರ ಮಾಗಡಿ ತಾಲೂಕು ಕದರಯ್ಯನ ಪಾಳ್ಯದಲ್ಲಿ ಮನೆಯಲ್ಲಿ ಮಲಗಿದ್ದ ಮೂರು ವರ್ಷದ ಮಗುವಿನ ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿತ್ತು. ನಂತರ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದ್ದರಿಂದ ಗ್ರಾಮಸ್ಥರಲ್ಲಿ ಆತಂಕ ದೂರವಾಗಿತ್ತು. ಇದೀಗ ಇಲ್ಲಿಂದ ಕೆಲವೇ ಕಿಮೀ ದೂರ ಇರುವ ಕೊಟ್ಟಗಾನಹಳ್ಳಿಯಲ್ಲಿ ಚಿರತೆ ದಾಳಿ ಮಾಡಿದ್ದರಿಂದ ಆತಂಕ ಮತ್ತೆ ಹೆಚ್ಚಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next