Advertisement

ನಾಯಿ ಬೇಟೆಗೆ ಬಂದು ಬೋನಿಗೆ ಬಿದ್ದ ಚಿರತೆ

06:58 PM Sep 16, 2021 | Team Udayavani |

ಕುಮಟಾ: ಆಹಾರ ಅರಸಿ ಬಂದಿದ್ದ ಚಿರತೆಯೊಂದು ಬೋನಿನಲ್ಲಿ ಇದ್ದ ನಾಯಿ ಹಿಡಿಯಲು ಹೋಗಿ ಬಂಧಿಯಾದ ಘಟನೆ ತಾಲೂಕಿನ ಕಿಮಾನಿಯಲ್ಲಿ ಗುರುವಾರ ನಡೆದಿದೆ.

Advertisement

ರಾತ್ರಿ ನಾಯಿ ಬೇಟೆಗೆ ಬಂದಿದ್ದ ಚಿರತೆ ಬೋನಿನೊಳಗೆ ಹೋಗಿದ್ದನ್ನು ಗಮನಿಸಿದ ಮನೆಯ ಮಾಲೀಕರು ತಕ್ಷಣ ಅದನ್ನು ಲಾಕ್ ಮಾಡಿದ್ದಾರೆ. ಈ ವೇಳೆಗಾಗಲೇ ಬೋನಿನಲ್ಲಿದ್ದ ನಾಯಿ ತಪ್ಪಿಸಿಕೊಂಡಿತ್ತು. ತಕ್ಷಣ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಚಿರತೆಯನ್ನು ಹಿಡಿದು ಸುರಕ್ಷತೆ ಸ್ಥಳಕ್ಕೆ ಸ್ಥಳಾಂತರಿಸಿದರು.

ಈ ವೇಳೆ ಎಸಿಎಫ್ ಗುರುದಾಸ ಶೇಟ್, ಆರ್‍ಎಫ್ಒ ನರೇಶ್ ಹಾಗೂ ವನ್ಯಜೀವಿ ಸಂರಕ್ಷಕರಾದ ಅಶೋಕ್ ನಾಯ್ಕ‌ ತದಡಿ, ಪವನ ನಾಯ್ಕ ಕುಮಟಾ, ಮಹೇಶ ನಾಯ್ಕ ಅಂಕೋಲಾ ಇವರು ಚಿರತೆ ಸೆರೆಹಿಡಿಯುವಲ್ಲಿ ಸಹಕರಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next