Advertisement

ಬೆಳ್ತಂಗಡಿ: ಬಳಂಜದ ಮನೆಯೊಂದರ ಅಂಗಳದಲ್ಲೇ ಚಿರತೆ ಪ್ರತ್ಯಕ್ಷ: ಸೆರೆಗೆ ಬೋನ್ ಕಾರ್ಯಾಚರಣೆ

05:37 PM Jun 11, 2022 | Team Udayavani |

ಬೆಳ್ತಂಗಡಿ: ಬಳಂಜ ಗ್ರಾಮದ ಪರಾರಿ ನಿವಾಸಿ ರಾಮಣ್ಣ ಪೂಜಾರಿ ಎಂಬುವರ ಮನೆಯ ಅಂಗಳದಲ್ಲಿ ರಾತ್ರಿ ಚಿರತೆಯೊಂದು ಅಲೆದಾಡುತ್ತಿದ್ದ ದೃಶ್ಯ ಅವರ ಮನೆಯ ಸಿಸಿ ಕ್ಯಾಮರಾದಲ್ಲಿ ಜೂ.10 ರಂದು ಸೆರೆಯಾಗಿದೆ.

Advertisement

ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ಅರಣ್ಯ ಇಲಾಖೆಯವರು ಇದರ ಸೆರೆಗಾಗಿ ಬೋನ್ ಕಾರ್ಯಾಚರಣೆ ನಡೆಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ಗ್ರಾಮದಲ್ಲಿ ನಾಯಿ, ಬೆಕ್ಕುಗಳು ಕಾಣೆಯಾಗುತ್ತಿದ್ದು ಜನ ಆತಂಕದಲ್ಲಿದ್ದರು. ಇದೀಗ ಮನೆಯಂಗಳಕ್ಕೆ ಚಿರತೆಗಳು ಬರುವುದರಿಂದ ಜನ ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ.

ಇದೇ ಜೂನ್ 2 ರಂದು ಸುಲ್ಕೇರಿ ಸಮೀಪ ನಾವರ ಗ್ರಾಮದಲ್ಲಿ ವಸಂತ ಕೋಟ್ಯಾನ್ ಎಂಬುವರ ಮನೆಯ ಹಿಂಬದಿ ಬಾಯಿಗೆ ಚಿರತೆ ಬಿದ್ದತ್ತು. ಬಳಿಕ ಕಾರ್ಕಳ ಅರಣ್ಯ ಇಲಾಖೆ ತಂಡ ರಕ್ಷಿಸಿದ್ದರು. ಈ ಪ್ರದೇಶದಲ್ಲಿ ಆಗಾಗ ಚಿರತೆಗಳು ಪ್ರತ್ಯಕ್ಷವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಮನೆಯಂಗಳಕ್ಕೆ ಚಿರತೆ ಬಂದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಪತ್ತೆಯಾಗಿದ್ದು ಈ ಬಗ್ಗೆ ಇದರ ಸೆರೆಗಾಗಿ ಬೋನ್ ಅಳವಡಿಕೆ ಮಾಡಿದ್ದೇವೆ. ಬೋನಿನೊಳಗೆ ನಾಯಿಯನ್ನು ಇಡಲಾಗಿದ್ದು ಶೀಘ್ರವಾಗಿ ಸೆರೆ ಹಿಡಿಯಲಾಗುವುದು ಎಂದು ಅಳದಂಗಡಿ ಉಪ ವಲಯ ಅರಣ್ಯಾಧಿಕಾರಿ ಸುರೇಶ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next