Advertisement

ಶಿವಮೊಗ್ಗ : ಕೊಮ್ಮನಾಳು ಭಾಗದ ಜನರಲ್ಲಿ ಭೀತಿ ಹುಟ್ಟಿಸಿದ್ದ ಹೆಣ್ಣು ಚಿರತೆ ಕೊನೆಗೂ ಸೆರೆ

12:09 PM Aug 30, 2022 | Team Udayavani |

ಶಿವಮೊಗ್ಗ : ಕಳೆದ ಕೆಲವು ದಿನಗಳಿಂದ ನಗರದ ಕೆಲವು ಕಡೆಗಳಲ್ಲಿ ಗ್ರಾಮದ ಜನರ ನಿದ್ದೆಗೆಡಿಸಿದ್ದ ಹೆಣ್ಣು ಚಿರತೆಯೊಂದು ಕೊನೆಗೂ ಸೆರೆಯಾಗಿದೆ.

Advertisement

ಶಿವಮೊಗ್ಗ ಗ್ರಾಮಾಂತರ ಭಾಗದ ಕೊಮ್ಮನಾಳು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚಿರತೆ ಕಾಣಿಸಿಕೊಂಡಿತ್ತು, ಬನ್ನಿಕೆರೆ ಗ್ರಾಮದ ಹೊನ್ನಾಳಿ ಭಾಗದಲ್ಲೂ ಚಿರತೆ ಕಾಣಿಸಿಕೊಂಡು ಜನರು ಭಯಭೀತರಾಗಿದ್ದರು. ಈ ಕುರಿತು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಸೆರೆಗೆ ವ್ಯವಸ್ಥೆ ಮಾಡಿಕೊಂಡಿದ್ದರು ಆದರೆ ಇಂದು ಅರಣ್ಯ ಇಲಾಖೆಯ ಅಧಿಕಾರಿಗಳ ಕಾರ್ಯಾಚರಣೆಗೆ ಯಶಸ್ಸು ಸಿಕ್ಕಿದೆ. ಇದರೊಂದಿಗೆ ಗ್ರಾಮದ ಜನರಲ್ಲಿ ಮನೆಮಾಡಿದ್ದ ಆತಂಕ ದೂರವಾಗಿದೆ.

ಈ ಹಿಂದೆ ಹೊನ್ನಾಳಿಯ ಪಲವನಹಳ್ಳಿ ಗ್ರಾಮದಲ್ಲಿ ಮಹಿಳೆಯೋರ್ವರನ್ನು ಗಾಯಗೊಳಿಸಿತ್ತು.

ಇದನ್ನೂ ಓದಿ : ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ಹೇಳಿಕೆ ಪ್ರತಾಪ್ ಸಿಂಹ ವಿರುದ್ಧ ಹೆಚ್.ಡಿಕೆ ಕಿಡಿ

Advertisement

Udayavani is now on Telegram. Click here to join our channel and stay updated with the latest news.

Next