Advertisement

ಯಲ್ಲಾಪುರ: ಹೆಣ್ಣು ಚಿರತೆ ಅಸಹಜ ಸಾವು, ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

09:32 PM Feb 08, 2023 | Team Udayavani |

ಯಲ್ಲಾಪುರ: ತಾಲೂಕಿನ ಆನಗೋಡದಿಂದ ಸಾವಗದ್ದೆಗೆ ಹೋಗುವ ಮಾರ್ಗದಲ್ಲಿ ರಸ್ತೆ ಬದಿಯಲ್ಲಿ ಅಸಹಜವಾಗಿ ಹೆಣ್ಣು ಚಿರತೆಯೊಂದು ಬುಧವಾರ ಮೃತ ಪಟ್ಟಿರುವುದು ಗಮನಕ್ಕೆ ಬಂದಿದೆ.

Advertisement

ಚಿರತೆ ಸತ್ತಿರುವ ಸ್ಥಳಕ್ಕೆ ಉಪರಣ್ಯ ಸಂರಕ್ಷಣಾಧಿಕಾರಿ ಎಸ್.ಜಿ.ಹೆಗಡೆ ಏಸಿಎಫ್ ಆನಂದ, ಆರ್.ಎಫ್.ಓ ಎಲ್.ಎ.ಮಠ್ ಭೆಟಿ ನೀಡಿ ಪರಿಶೀಲಿಸಿ ನಂತರ ಪಶು ವೈದ್ಯಾಧಿಕಾರಿ ಮೂಲಕ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ.

ಈ ಹಿಂದೆಯೂ ಈ ಭಾಗದಲ್ಲಿ ಇದೇ ರೀತಿಯಲ್ಲಿ ಚಿರತೆಯೊಂದು ಅಸಹಜವಾಗಿ ಪ್ರಕರಣವೊಂದು ದಾಖಲಾಗಿತ್ತು ಎನ್ನುವುದು ಉಲ್ಲೇಖನೀಯ. ಈ ರೀತಿ ಅಸಹಜ ಸಾವು ಈ ಪ್ರದೇಶದಲ್ಲಿ ನಡೆಯುತ್ತಿರುವುದು ಹಲವು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಇತ್ತೀಚಿನ ದಿನದಲ್ಲಿ ಈ ಭಾಗದಲ್ಲಿ ಚಿರತೆಯ ಉಪಟಳ ಮಿತಿ ಮೀರಿತ್ತೆಂಬ ಮಾತು ಕೇಳಿ ಬಂದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next