Advertisement

Dharmasthala ಸಮೀಪ ಹಸುವನ್ನು ಭಕ್ಷಿಸಿದ ಚಿರತೆ

12:46 AM Apr 19, 2023 | Team Udayavani |

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೇರ್ತನೆಯಲ್ಲಿ ಮನೆಯ ಸಮೀಪವಿದ್ದ ಹಟ್ಟಿಗೆ ನುಗ್ಗಿದ ಚಿರತೆ ಕಟ್ಟಿ ಹಾಕಿದ್ದ ದನವೊಂದನ್ನು ಕೊಂದು ತಿಂದಿರುವ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

Advertisement

ತ್ರೇಸ್ಯಾಮ್ಮ ಪಿ.ಕೆ. ಅವರ ಮನೆಯ ಸಮೀಪದ ಹಟ್ಟಿಯಲ್ಲಿದ್ದ ದನವನ್ನು ರಾತ್ರಿಯ ವೇಳೆ ಚಿರತೆ ಕೊಂದು ತಿಂದಿದೆ.

ನೇರ್ತನೆಯಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ಹಾಗೂ ಆನೆಗಳ ಹಾವಳಿ ತುಂಬಾ ಹೆಚ್ಚಾಗಿದೆ. ಕೃಷಿಕರು ಆತಂಕದಲ್ಲಿಯೇ ಬದುಕಬೇಕಾದ ಸ್ಥಿತಿ ಎದುರಾಗಿದೆ. ತ್ರೇಸ್ಯಾಮ್ಮ ಅವರ ಮನೆ ಅರಣ್ಯದ ಸಮೀಪವೇ ಇದೆ. ಆಶಾ ಕಾರ್ಯಕರ್ತೆಯಾಗಿರುವ ಆಕೆ ಹೈನುಗಾರಿಯನ್ನೇ ಅವಲಂಬಿಸಿದ್ದಾರೆ. ಮುಂಡಾಜೆ ಧುಂಬೆಟ್ಟು ಪರಿಸರದಲ್ಲಿ ಕೆಲವು ದಿನಗಳ ಹಿಂದೆ ಚಿರತೆ dಕಾಣಿಸಿಕೊಂಡು ನಾಯಿಗಳನ್ನು ತಿಂದು ಹಾಕಿತ್ತು. ಒಟ್ಟಿನಲ್ಲಿ ವನ್ಯಜೀವಿಗಳ ಹಾವಳಿಯಿಂದ ಗ್ರಾಮೀಣ ಭಾಗದ ಜನತೆ ಕಂಗೆಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next