Advertisement

ಯಡೂರ- ಚೆಂದೂರ ಭಾಗದಲ್ಲಿ ಚಿರತೆ ಪ್ರತ್ಯಕ್ಷ: ಅರಣ್ಯ ಇಲಾಖೆ ಕಾರ್ಯಾಚರಣೆ

10:07 PM Jul 29, 2022 | Team Udayavani |

ಚಿಕ್ಕೋಡಿ: ಕೃಷ್ಣಾ ನದಿ ತಟದಲ್ಲಿ ಇರುವ ಚಿಕ್ಕೋಡಿ ತಾಲೂಕಿನ ಚೆಂದೂರ.ಯಡೂರ ಮತ್ತು ಯಡೂರವಾಡಿ ಗ್ರಾಮದ ವ್ಯಾಪ್ತಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು. ಕಳೆದ ಒಂದು ವಾರದಿಂದ ಜನ ಭಯ ಭೀತಿಯಾಗಿದ್ದು. ಚಿರತೆ ಹಿಡಿಯಲು ಅರಣ್ಯ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

Advertisement

ಕೃಷ್ಣಾ ನದಿ ತೀರದ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಚಿರತೆ ರಾತ್ರಿ ಹೊತ್ತು ಕಾಣಿಸಿಕೊಂಡಿದೆ ಎಂಬುದು ಜನ ಅಲ್ಲಲ್ಲಿ ಮಾತನಾಡುವುದು ಕಂಡು ಬಂದಿತ್ತು. ಕುರಿ.ಆಡು ಮತ್ತು ನಾಯಿ ಮೇಲೆ ಅಟ್ಯಾಕ ಮಾಡಿ ದ ಮೇಲೆ ಚಿರತೆ ಇರುವುದು ಖಚಿತವಾಗಿದೆ.

ಈಗಾಗಲೇ ಮೂರು ಗ್ರಾಮದಲ್ಲಿ ಎರಡರಿಂದ ಮೂರು ನಾಯಿ ಮತ್ತು ಮೇಕೆಗಳನ್ನು ಎಳೆದು ತಿಂದಿರುವುದು ಖಚಿತವಾಗಿದೆ.

ಸುದ್ದಿ ತಿಳಿದ ಕೂಡಲೇ ಚಿಕ್ಕೋಡಿ ಅರಣ್ಯ ಇಲಾಖೆ ಸಿಬ್ಬಂದಿಗಳು ಚೆಂದೂರ. ಚಂದೂರ ಟೇಕ ಮತ್ತು ಯಡೂರ ಗ್ರಾಮದಲ್ಲಿ ಸಂಚರಿಸಿ ಪರಿಶೀಲಿಸಿದ್ದು. ಚಿರತೆಯ ಹೆಜ್ಜೆ ಗುರ್ತು ಇರುವುದು ಖಚಿತವಾಗಿದೆ. ನಿನ್ನೆ ರಾತ್ರಿ ಚಿರತೆ ನಾಯಿ ಮೇಲೆ ಅಟ್ಯಾಕ ಮಾಡಿರುವ ವಿಡಿಯೋ ವೈರಲ್ ಆಗಿದೆ. ಇದಿರಿಂದ ಅರಣ್ಯ ಇಲಾಖೆ ಸಿಬ್ಬಂದಿಗಳು ಮೂರು ಗ್ರಾಮದಲ್ಲಿ ಚಿರತೆ ಹಿಡಿಯುವ ಮೂರು ಬೋನ್ ಇಟ್ಟು ಹಿಡಿಯಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದಾರೆ.

ರಾತ್ರಿ ಹೊತ್ತು ಜನರು ಹೊರಬರದಂತೆ ಡಂಗೂರ:
ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಚಿರತೆ ಇರುವುದು ಖಚಿತವಾಗಿದ್ದರಿಂದ ರಾತ್ರಿ ಹೊತ್ತು ಒಬ್ಬೋಬ್ಬರಾಗಿ ತಿರುಗಾಡಬಾರದೆಂದು ಆಯಾ ಗ್ರಾಮ ಪಂಚಾಯತಿ ವತಿಯಿಂದ ಡಂಗೂರ ಸಾರಿದ್ದಾರೆ.ಕೃಷ್ಣಾ ನದಿ ನೀರಿ‌ನ ಮಟ್ಡ ಇಳಿಕೆ ಕಂಡಿರುವುದರಿಂದ ಜಮೀನಿಗೆ ನೀರಿನ ಪಂಪಸೆಟ್ ಚಾಲು ಮಾಡಲು ರೈತರು ಹೊಲಗಳತ್ತ ಹೋಗುತ್ತಾರೆ. ಚಿರತೆ ಇರುವುದರಿಂದ ಜನ ಆತಂಕಗೊಂಡಿದ್ದು. ರಾತ್ರಿ ಹೊತ್ತು ನಾಲ್ಕೈದು ಜನ ಕೂಡಿಕೊಂಡು ಹೊರಗೆ ಹೋಗಬೇಕೆಂದು ಡಂಗೂರ ಸಾರಿದ್ದಾರೆ.

Advertisement

ಶೀಘ್ರವಾಗಿ ಚಿರತೆ ಹಿಡಿಯುತ್ತೇವೆ :
ಯಡೂರ. ಚೆಂದೂರ ಮತ್ತು ಚೆಂದೂರ ಟೇಕ ಗ್ರಾಮಗಳಲ್ಲಿ ಚಿರತೆ ಇರುವುದು ನಿಜ. ಚಿರತೆ ಹಿಡಿಯಲು ಅರಣ್ಯ ಇಲಾಖೆ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಬೋನ್ ಮತ್ತು ಕ್ಯಾಮರಾ ಅಳವಡಿಸಿದ್ದು. ಶೀಘ್ರವಾಗಿ ಚಿರತೆ ಹಿಡಿಯುತ್ತೇವೆ ಜನರು ಹೆದರುವ ಅವಶ್ಯಕತೆ ಇಲ್ಲ ಎನ್ನುತ್ತಾರೆ ಚಿಕ್ಕೋಡಿ ಆರ್ ಎಫ್ ಒ ಪ್ರಶಾಂತ ಗೌರಾಣಿ.

Advertisement

Udayavani is now on Telegram. Click here to join our channel and stay updated with the latest news.

Next