Advertisement
ಕೃಷ್ಣಾ ನದಿ ತೀರದ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಚಿರತೆ ರಾತ್ರಿ ಹೊತ್ತು ಕಾಣಿಸಿಕೊಂಡಿದೆ ಎಂಬುದು ಜನ ಅಲ್ಲಲ್ಲಿ ಮಾತನಾಡುವುದು ಕಂಡು ಬಂದಿತ್ತು. ಕುರಿ.ಆಡು ಮತ್ತು ನಾಯಿ ಮೇಲೆ ಅಟ್ಯಾಕ ಮಾಡಿ ದ ಮೇಲೆ ಚಿರತೆ ಇರುವುದು ಖಚಿತವಾಗಿದೆ.
Related Articles
ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಚಿರತೆ ಇರುವುದು ಖಚಿತವಾಗಿದ್ದರಿಂದ ರಾತ್ರಿ ಹೊತ್ತು ಒಬ್ಬೋಬ್ಬರಾಗಿ ತಿರುಗಾಡಬಾರದೆಂದು ಆಯಾ ಗ್ರಾಮ ಪಂಚಾಯತಿ ವತಿಯಿಂದ ಡಂಗೂರ ಸಾರಿದ್ದಾರೆ.ಕೃಷ್ಣಾ ನದಿ ನೀರಿನ ಮಟ್ಡ ಇಳಿಕೆ ಕಂಡಿರುವುದರಿಂದ ಜಮೀನಿಗೆ ನೀರಿನ ಪಂಪಸೆಟ್ ಚಾಲು ಮಾಡಲು ರೈತರು ಹೊಲಗಳತ್ತ ಹೋಗುತ್ತಾರೆ. ಚಿರತೆ ಇರುವುದರಿಂದ ಜನ ಆತಂಕಗೊಂಡಿದ್ದು. ರಾತ್ರಿ ಹೊತ್ತು ನಾಲ್ಕೈದು ಜನ ಕೂಡಿಕೊಂಡು ಹೊರಗೆ ಹೋಗಬೇಕೆಂದು ಡಂಗೂರ ಸಾರಿದ್ದಾರೆ.
Advertisement
ಶೀಘ್ರವಾಗಿ ಚಿರತೆ ಹಿಡಿಯುತ್ತೇವೆ :ಯಡೂರ. ಚೆಂದೂರ ಮತ್ತು ಚೆಂದೂರ ಟೇಕ ಗ್ರಾಮಗಳಲ್ಲಿ ಚಿರತೆ ಇರುವುದು ನಿಜ. ಚಿರತೆ ಹಿಡಿಯಲು ಅರಣ್ಯ ಇಲಾಖೆ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಬೋನ್ ಮತ್ತು ಕ್ಯಾಮರಾ ಅಳವಡಿಸಿದ್ದು. ಶೀಘ್ರವಾಗಿ ಚಿರತೆ ಹಿಡಿಯುತ್ತೇವೆ ಜನರು ಹೆದರುವ ಅವಶ್ಯಕತೆ ಇಲ್ಲ ಎನ್ನುತ್ತಾರೆ ಚಿಕ್ಕೋಡಿ ಆರ್ ಎಫ್ ಒ ಪ್ರಶಾಂತ ಗೌರಾಣಿ.