Advertisement

ಅರಣ್ಯ ಇಲಾಖೆ ಬೋನಿಗೆ ಚಿರತೆ

06:43 AM Feb 26, 2019 | Team Udayavani |

ಗಂಗಾವತಿ: ಕೆಲವು ತಿಂಗಳುಗಳಿಂದ ಜನ ಜಾನುವಾರುಗಳಿಗೆ ತೊಂದರೆ ನೀಡುತ್ತಿದ್ದ ಚಿರತೆಯನ್ನು ಸೋಮವಾರ ಬೆಳಗಿನ ಜಾವ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ತಾಲೂಕಿನ ಆನೆಗೊಂದಿ ವಾಲೀಕಿಲ್ಲಾ ತಳವಾರಘಟ್ಟ ಪ್ರದೇಶದಲ್ಲಿ ಆಗಾಗ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ 7 ವರ್ಷದ ಗಂಡು ಚಿರತೆ ಅರಣ್ಯ ಇಲಾಖೆ ತಳವಾರ ಘಟ್ಟ ಪ್ರದೇಶದಲ್ಲಿ ಇಟ್ಟಿದ್ದ ಬೋನಿಗೆ ಬಿದ್ದಿದೆ. ಆಡು, ಕುರಿ ಹೊತ್ತೂಯ್ದಿತ್ತು. ಇತ್ತೀಚೆಗೆ ಕುದುರೆಯನ್ನು ಕೊಂದು ಹಾಕಿತ್ತು.

Advertisement

ಇದರಿಂದ ಆತಂಕಗೊಂಡ ಜನರು ಅರಣ್ಯ ಇಲಾಖೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಬೋನ್‌ ಇರಿಸಲಾಗಿತ್ತು. ಸೋಮವಾರ ಬೆಳಗಿನ ಜಾವದಲ್ಲಿ ಚಿರತೆ ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆ ವೀಕ್ಷಕ ರಾಮಣ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ನಂತರ ಮೇಲಾಧಿಕಾರಿಗಳ ಆದೇಶದಂತೆ ದೂರದ ಅರಣ್ಯ ಪ್ರದೇಶಕ್ಕೆ ಬಿಡಲಾಗುತ್ತದೆ ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next