Advertisement

ಕಾರ್ಕಳ: ಬಾವಿಗೆ ಬಿದ್ದ ಚಿರತೆ, ಅರಣ್ಯಾಧಿಕಾರಿಗಳಿಂದ ರಕ್ಷಣೆ

11:59 AM Apr 11, 2022 | Team Udayavani |

ಕಾರ್ಕಳ: ಕಾರ್ಕಳ ತಾ| ಕಸಬ ಗ್ರಾಮದ ಅತ್ತೂರು ಬಳಿ ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ರವಿವಾರ ರಕ್ಷಿಸಿದ್ದಾರೆ. ಸ್ಥಳಿಯ ನಿವಾಸಿ ವಿನ್ಸೆಂಟ್‌ ನವೀನ್‌ ಕ್ಯಾಸ್ತಲಿನೋ ಎಂಬವರ ಬಾವಿಗೆ ರವಿವಾರ ಬೆಳಗ್ಗಿನ ಜಾವ ಚಿರತೆ ಯೊಂದು ಬಿದ್ದಿದ್ದು ಬಳಿಕ ಅವರು ಅರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದರು.

Advertisement

ಸ್ಥಳಕ್ಕೆ ಅರಣ್ಯಾಧಿಕಾರಿಗಳ ತಂಡ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಕಾರ್ಕಳ ವಲಯ ಅರಣ್ಯಾಧಿಕಾರಿ ಜಿ.ಡಿ. ದಿನೇಶ್‌ ಅವರ ನೇತೃತ್ವದಲ್ಲಿ ಚಿರತೆಯನ್ನು ಬಾವಿಯಿಂದ ಮೇಲಕೆತ್ತಿ ಬೋನಿನ ಮೂಲಕ ರಕ್ಷಿಸುವ ಕಾರ್ಯ ನಡೆಯಿತು.

ಇದು ಗಂಡು ಚಿರತೆಯಾಗಿದ್ದು ಸುಮಾರು 6 ವರ್ಷ ಪ್ರಾಯ ಆಗಿರಬಹುದೆಂದು ಅರಣ್ಯಾಧಿಕಾರಿ ಗಳು ಅಂದಾಜಿಸಿದ್ದಾರೆ. ಚಿರತೆ ದಷ್ಟಪುಷ್ಟವಾಗಿದ್ದು ರಕ್ಷಿಸಿದ ಬಳಿಕ ಆರೋಗ್ಯ ತಪಾಸಣೆ ನಡೆಸಿ, ಸುರಕ್ಷಿತ ಪ್ರದೇಶಕ್ಕೆ ಬಿಡಲಾಯಿತು.

ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಪ್ರಕಾಶ್ಚಂದ್ರ, ಹುಕ್ರಪ್ಪ ಗೌಡ, ರಾಘವೇಂದ್ರ ಶೆಟ್ಟಿ, ಚಂದ್ರಕಾಂತ್‌, ಅರಣ್ಯ ರಕ್ಷಕರಾದ ಎ.ಡಿ ಪೊನ್ನಪ್ಪ, ಭಾಸ್ಕರ, ಶ್ರೀಧರ್‌ ನರೇಗಲ್, ಪ್ರಕಾಶ್‌, ಮಹಾಂತೇಶ್‌ ಎಚ್‌ ಗೋಡಿ, ಬಾಬು ಪೂಜಾರಿ, ಶಮೀಮ್, ಬಾಬುಪೂಜಾರಿ ಯಾನೆ ಪ್ರಕಾಶ್‌, ಶ್ರೀಧರ ಪೂಜಾರಿ ಹಾಗೂ ಸ್ಥಳೀಯರಾದ ಮಾಜಿ ಎ.ಪಿ.ಎಂಸಿ ಅಧ್ಯಕ್ಷ ಬಾಲಕೃಷ್ಣ ಹೆಗ್ಡೆ, ಹಾಗೂ ಇನ್ನಿತರರ ಸಹಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next