Advertisement

Manipal ಸರಳೆಬೆಟ್ಟಿನಲ್ಲಿ ಚಿರತೆ ಓಡಾಟ?

12:18 AM Sep 03, 2024 | Team Udayavani |

ಮಣಿಪಾಲ: ಸರಳೆಬೆಟ್ಟು ಸಮೀಪದ ಶಿವಪಾಡಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ದೇಗುಲದ ಅರ್ಚಕರ ಮನೆಯ ಬಳಿಯಲ್ಲಿ ಚಿರತೆ ಓಡಾಡುತ್ತಿರುವುದನ್ನು ಕಂಡಿದ್ದೇವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Advertisement

ಕೆಲವು ದಿನಗಳ ಹಿಂದೆ ಮಣಿಪಾಲ ಸುತ್ತಮುತ್ತ ಚಿರತೆ ಕಾಣಿಸಿಕೊಂಡಿತ್ತು. ಸ್ವಲ್ಪ ಸಮಯದ ವರೆಗೆ ಇದರ ಓಡಾಟದ ಬಗ್ಗೆ ಮಾಹಿತಿ ಇರಲಿಲ್ಲ. ಈಗ ಮತ್ತೆ ಅಲ್ಲಲ್ಲಿ ಚಿರತೆ ಓಡಾಡುತ್ತಿರುವ ಬಗ್ಗೆ ಸ್ಥಳೀಯರು ಹೇಳಿಕೊಳ್ಳುತ್ತಿದ್ದಾರೆ.

ಸ್ಥಳೀಯರಾದ ಸುಶಾಂತ್‌ ಸಾಲ್ಯಾನ್‌ ಅವರು ರಾತ್ರಿ 12.30ಕ್ಕೆ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ರಸ್ತೆ ಮಧ್ಯೆ ಚಿರತೆ ನಿಂತುಕೊಂಡಿದ್ದುದನ್ನು ಕಂಡಿರುವುದಾಗಿ ತಿಳಿಸಿದ್ದಾರೆ.

ಅರಣ್ಯ ಇಲಾಖೆಗೂ ಸ್ಥಳೀಯರು ಚಿರತೆ ಬಗ್ಗೆ ಮಾಹಿತಿ ನೀಡಿದ್ದು, ಇಲಾಖೆ ಅಧಿಕಾರಿಗಳು ಹಾಗೂ ಸಿಬಂದಿ ಪರಿಶೀಲಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next