Advertisement

ಕುಣಿಗಲ್: ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಗೆ ಗಂಭೀರ ಗಾಯ

09:03 AM Oct 28, 2022 | Team Udayavani |

ಕುಣಿಗಲ್: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ರಾಜ್ಯ ಹೆದ್ದಾರಿ 33 ಗವಿಮಠ ಬಳಿ ಶುಕ್ರವಾರ ಬೆಳಗ್ಗಿನ ಜಾವ ಸಂಭವಿಸಿದೆ.

Advertisement

ಇಂದು ಬೆಳಗ್ಗೆ ಒಂದುವರೆ ವರ್ಷದ ಹೆಣ್ಣು ಚಿರತೆ ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ತೀವ್ರವಾಗಿ ಗಾಯಗೊಂಡಿದೆ.

ಮುಂಜಾನೆ ವಿಹಾರಕ್ಕೆ ಹೋಗಿದ್ದ ಸಾರ್ವಜನಿಕರು ರಸ್ತೆಯಲ್ಲಿ ಗಾಯಗೊಂಡು ಬಿದ್ದಿದ್ದ ಚಿರತೆಯನ್ನು ನೋಡಿ ಅರಣ್ಯ ಸಂರಕ್ಷಣಾಧಿಕಾದಿ ಮಹಮ್ಮದ್ ಮನ್ಸೂರ್ ಗೆ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂದ ಆರ್ ಎಫ್ ಓ ಮನ್ಸೂರ್ ಹಾಗೂ ಸಿಬ್ಬಂದಿ ಗಾಯಗೊಂಡಿದ್ದ ಚಿರತೆಯನ್ನು ರಂಗಸ್ವಾಮಿ ಬೆಟ್ಟದ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಪಶು ವೈದ್ಯರಿಂದ ಚಿಕಿತ್ಸೆ ಕೊಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next