Advertisement
ನಗರದ ಆಲೂರು ವೆಂಕಟರಾವ್ ಭವನದಲ್ಲಿ ಸೆಕ್ಟರ್ ಅಧಿಕಾರಿಗಳು, ಮತ ಎಣಿಕೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕ ಅ ಧಿಕಾರಿಗಳಿಗೆ ಮತ ಎಣಿಕೆ ಕಾರ್ಯ ಕುರಿತು ಹಮ್ಮಿಕೊಳ್ಳಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಚುನಾವಣಾ ಪ್ರಕ್ರಿಯೆ ನಡೆಯುತ್ತಿದೆ. ಮತ ಎಣಿಕೆ ಕಾರ್ಯ ಸಹ ಸಮರ್ಪಕವಾಗಿ ನಡೆಯುವಂತೆ ಎಚ್ಚರ ವಹಿಸಬೇಕು. ಯಾವುದೇ ಒತ್ತಡಗಳಿಗೆ ಒಳಗಾಗದೇ ಕರ್ತವ್ಯ ನಿರ್ವಹಿಸಬೇಕು. ಪ್ರತಿ ಸುತ್ತಿನ ನಂತರ ಅಭ್ಯರ್ಥಿಯ ಪ್ರತಿನಿಧಿಗಳ ಸಹಿ ಪಡೆಯಬೇಕು ಎಂದರು.
Related Articles
Advertisement
ಬೆಳಿಗ್ಗೆ 8:00 ಗಂಟೆಗೆ ಸರಿಯಾಗಿ ಪೋಸ್ಟಲ್ ಮತಗಳ ಎಣಿಕೆ ಕ್ಷೇತ್ರ ಚುನಾವಣಾಧಿ ಕಾರಿಗಳ ಟೇಬಲ್ನಲ್ಲಿ ಪ್ರಾರಂಭಗೊಂಡು, ಉಳಿದಂತೆ ಮತಗಟ್ಟೆಗಳಲ್ಲಿ ಇವಿಎಂ ಮೂಲಕ ದಾಖಲಾದ ಮತಗಳ ಎಣಿಕೆ ಕಾರ್ಯ ಪ್ರಾರಂಭವಾಗುತ್ತದೆ. ಆಯೋಗ ನೀಡಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.
ಉಪವಿಭಾಗಾಧಿಕಾರಿ ಪಿ. ಜಯಮಾಧವ ಮಾತನಾಡಿದರು. ಅಪರ ಜಿಲ್ಲಾಧಿ ಕಾರಿ ರಮೇಶ ಕಳಸದ, ಪ್ರೊಬೆಷನರಿ ಉಪವಿಭಾಗಾ ಧಿಕಾರಿ ಶೇಖರ್ ಇದ್ದರು. ತರಬೇತಿಯಲ್ಲಿ ಚುನಾವಣಾ ಮತ ಎಣಿಕೆಗೆ ನಿಯೋಜನೆಗೊಂಡಿರುವ ಮತ ಎಣಿಕೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕರು ಪಾಲ್ಗೊಂಡಿದ್ದರು.