Advertisement

ಬಿಎಸ್‌ವೈ ಇದೊಂದು ಬಾರಿ ಸ್ಪರ್ಧಿಸಲಿ: ಸೋಮಶೇಖರ ರೆಡ್ಡಿ

12:21 AM Feb 27, 2023 | Team Udayavani |

ಬಳ್ಳಾರಿ: ಮಾಜಿ ಸಿಎಂ ಯಡಿಯೂರಪ್ಪನವರು ಇದೊಂದು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಬೇಕು. ಒಂದು ವೇಳೆ ಬಳ್ಳಾರಿ ನಗರ ಕ್ಷೇತ್ರದಿಂದ ಸ್ಪರ್ಧಿಸಿದರೂ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಅವರನ್ನು ಗೆಲ್ಲಿಸುವೆ ಎಂದು ಶಾಸಕ ಜಿ. ಸೋಮಶೇಖರ ರೆಡ್ಡಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಈಗಾಗಲೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಆದರೆ ಅವರ ರಾಜಕೀಯ ಅನುಭವ ಈ ರಾಜ್ಯದ ಅಭಿವೃದ್ಧಿಗೆ ಇನ್ನಷ್ಟು ಬೇಕು. ಅವರನ್ನು ಸದನದಲ್ಲಿ ನೋಡದಿದ್ದಲ್ಲಿ ಬೇಸರವಾಗಲಿದೆ. ಅವರೊಬ್ಬ ಧೀಮಂತ ನಾಯಕ. ಸದನದಲ್ಲಿ ಅವರು ಎದ್ದು ನಿಂತು ಮಾತನಾಡಿದರೆ ಅದರ ವಿಶೇಷತೆಯೇ ಬೇರೆ ಎಂದು ಬಣ್ಣಿಸಿದರು.

ಇತ್ತೀಚೆಗೆ ಸಂಡೂರಿಗೆ ಆಗಮಿಸಿದ್ದ ಯಡಿಯೂರಪ್ಪರನ್ನು ಭೇಟಿ ಮಾಡಿದಾಗ ಇದೊಂದು ಬಾರಿ ಸ್ಪರ್ಧಿಸುವಂತೆ ಮನವಿ ಮಾಡಿದ್ದೆ. ಒಂದು ವೇಳೆ ಅವರು ಬಳ್ಳಾರಿ ನಗರ ಕ್ಷೇತ್ರದಿಂದ ಸ್ಪರ್ಧಿಸಿದರೂ ಕ್ಷೇತ್ರ ಬಿಟ್ಟುಕೊಡಲು ಸಿದ್ಧನಿದ್ದು, ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಯಡಿಯೂರಪ್ಪನವರ ಸಲಹೆ, ಮಾರ್ಗದರ್ಶನ ಇಡೀ ಬಿಜೆಪಿಗೇ ಬೇಕು ಎಂದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next