Advertisement

ತಾಕತ್ತಿದ್ದರೆ ಕಾಂಗ್ರೆಸ್‌ ಲಿಂಗಾಯತ CM ಘೋಷಣೆ ಮಾಡಲಿ: ನಿರಾಣಿ

12:10 AM Apr 21, 2023 | Team Udayavani |

ಬಾಗಲಕೋಟೆ: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ದೂರದ ಮಾತು. ತಾಕತ್ತಿದ್ದರೆ ಅಧಿಕಾರಕ್ಕೆ ಬಂದರೆ ಲಿಂಗಾಯತರನ್ನೇ ಮುಖ್ಯಮಂತ್ರಿ ಮಾಡುತ್ತೇವೆ ಎಂದು ಈಗಲೇ ಘೋಷಣೆ ಮಾಡಲಿ ನೋಡೋಣ ಎಂದು ಕೈಗಾರಿಕೆ ಸಚಿವ, ಬೀಳಗಿ ಬಿಜೆಪಿ ಅಭ್ಯರ್ಥಿ ಮುರುಗೇಶ ನಿರಾಣಿ ಸವಾಲು ಹಾಕಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್‌ಗೆ ಹೋಗಿದ್ದರಿಂದ ನಮ್ಮ ಪಕ್ಷದ ಮೇಲೆ ಯಾವುದೇ ಪರಿಣಾಮ ಆಗದು. ಹುಬ್ಬಳ್ಳಿಯಲ್ಲಿ ಶೆಟ್ಟರ್‌ ಬಿಟ್ಟರೆ ಬಿಜೆಪಿಯ ಯಾವುದೇ ಒಬ್ಬ ಪದಾಧಿಕಾರಿಯೂ ಕಾಂಗ್ರೆಸ್‌ ಸೇರಿಲ್ಲ. ಶೆಟ್ಟರ್‌ ಬಗ್ಗೆ ನನಗೆ ಅಪಾರ ಗೌರವವಿದೆ. ಅವರು ಶಾಸಕರಾಗಿಯೇ ಇರುವುದಕ್ಕಿಂತ ರಾಜ್ಯಸಭೆಗೆ ಕಳುಹಿಸಿ, ಕೇಂದ್ರದಲ್ಲಿ ಸಚಿವರನ್ನಾಗಿ ಮಾಡುವುದಾಗಿ ಹೇಳಿದ್ದರು. ಆದರೂ ಅವರು ಹಠ ಹಿಡಿದು ಪಕ್ಷ ತೊರೆದಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next