Advertisement

ಶಾಸಕರಾಗುವ ಮೊದಲು ಮತ್ತು ಈಗ ಎಷ್ಟು ಆಸ್ತಿಯಿದೆ ಎಂದು ಹೇಳಿ: ಡಿಕೆಶಿಗೆ ಜೋಶಿ ಸವಾಲು

02:24 PM Oct 06, 2020 | keerthan |

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಾವು ಶಾಸಕರಾಗುವ ಮೊದಲು ಎಷ್ಟು ಆಸ್ತಿ ಇತ್ತು. ಈಗ ಎಷ್ಟಿದೆ ಎಂಬುದನ್ನು ತಿಳಿಸಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸವಾಲು ಹಾಕಿದರು‌.

Advertisement

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸತ್ಯ ಹರಿಶ್ಚಂದ್ರ ಹಾಗೂ ಪ್ರಾಮಾಣಿಕ ಎಂದು ಹೇಳಿದರೆ ಸಾಲುವುದಿಲ್ಲ. ಎಲ್ಲವೂ ತನಿಖೆಯಲ್ಲಿ ಬಹಿರಂಗವಾಗಲಿ ಎಂದರು.

ಈಗ ನಡೆದಿರುವ ಸಿಬಿಐ ದಾಳಿ ರಾಜಕೀಯ ಪ್ರೇರಿತ ಅಲ್ಲ. ಸಿಬಿಐ ದಾಳಿಗೆ ಆರರಿಂದ ಎಂಟು ತಿಂಗಳ ತಯಾರಿ ನಡೆದಿರುತ್ತದೆ ಎಂದು ಪ್ರಹ್ಲಾದ ಜೋಶಿ ಹೇಳಿದರು.

ಇದನ್ನೂ ಓದಿ:ಸಿಎಂ ಕುಟುಂಬದ ಭ್ರಷ್ಟಾಚಾರ ಮರೆಮಾಡಲು ಸಿಬಿಐ ದಾಳಿ: ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು ಕಾಂಗ್ರೆಸ್ ಮೊದಲಿನಿಂದಲೂ ದಲ್ಲಾಳಿಗಳ ಪಕ್ಷ. ಈಗ ಕೃಷಿ ಮಸೂದೆ ವಿಚಾರದಲ್ಲಿ ರೈತರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಕುಟುಂಬಕ್ಕೆ ಕಮಿಷನ್ ಬೇಕು. ಅದಕ್ಕೆ ವಿರೋಧ ವ್ಯಕ್ತಮಾಡುತ್ತಿದ್ದಾರೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next