Advertisement

ಅಭಿವೃದ್ಧಿ ವಿಚಾರ ಜನರಿಗೆ ತಲುಪಲಿ: ಹರೀಶ್‌ ಪೂಂಜ

09:55 AM Apr 25, 2022 | Team Udayavani |

ಬೆಳ್ತಂಗಡಿ: ಕಳೆದ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು 4 ವರ್ಷಗಳ ಅವಧಿಯಲ್ಲಿ ಅತ್ಯಂತ ಪ್ರಾಮಾಣಿಕವಾಗಿ ಈಡೇರಿಸುವ ಕೆಲಸ ಮಾಡಲಾಗಿದ್ದು, ಪಕ್ಷದ ಕಾರ್ಯಕರ್ತರು ತಾಲೂಕಿನ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಮುಟ್ಟಿಸುವ ಕಾರ್ಯ ಮಾಡಬೇಕಾಗಿದೆ ಎಂದು ಶಾಸಕ ಹರೀಶ್‌ ಪೂಂಜ ಹೇಳಿದ್ದಾರೆ.

Advertisement

ಅಳದಂಗಡಿ ಸ್ವರಾಜ್‌ ಸಭಾಭವನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣ ತಂಡದ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮಾತನಾಡಿ, ಬಿಜೆಪಿ ರಾಷ್ಟ್ರ ಚಿಂತನೆಯ ಆಧಾರದಲ್ಲಿ ಕೆಲಸವನ್ನು ಮಾಡುತ್ತಿದೆ ಎಂದರು. ರಾಜ್ಯದಲ್ಲಿ ಗಲಭೆ ಎಬ್ಬಿಸಿ, ಜನರಲ್ಲಿ ಗೊಂದಲವನ್ನು ಉಂಟು ಮಾಡಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ ಪಕ್ಷ ಪ್ರಯತ್ನ ಮಾಡುತ್ತಿದೆ. ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತ ನರೇಂದ್ರ ಮೋದಿಯಂತೆ ಕೆಲಸ ಮಾಡಿದರೆ ಕಾಂಗ್ರೆಸ್‌ ಧ್ವಂಸ ಆಗಲಿದೆ ಎಂದರು.

ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್‌ ಕೋಟ್ಯಾನ್‌ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್‌ ಶೆಟ್ಟಿ ಕಣ್ಣೂರು ಸಂಘಟನಾತ್ಮಕ ವಿಷಯಗಳ ಬಗ್ಗೆ ಮಾತನಾಡಿದರು.

ಮಂಡಲದ ಪ್ರಧಾನ ಕಾರ್ಯದರ್ಶಿ ಗಣೇಶ್‌ ಗೌಡ ನಾವೂರು, ಶಶಿಧರ್‌ ಅಳದಂಗಡಿ, ಸುಧೀರ್‌ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು. ಅಳದಂಗಡಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸದಾನಂದ ಉಂಗಿಲಬೈಲು ಸ್ವಾಗತಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್‌ ಮತ್ತು ಸಹಕಾರ ಭಾರತಿ ಅಧ್ಯಕ್ಷ ರಾಜೇಶ್‌ ಪೆಂರ್ಬುಡ ನಿರೂಪಿಸಿದರು. ಅಳದಂಗಡಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ವಿಶ್ವನಾಥ ಹೊಳ್ಳ ವಂದಿಸಿದರು.

Advertisement

ಸರಕಾರದತ್ತ ಒಲವು

ಸಮಾರೋಪ ಭಾಷಣ ಮಾಡಿದ ಬಿಜೆಪಿ ಹಿರಿಯರ ಪ್ರಕೋಷ್ಠ ರಾಜ್ಯ ಸಂಚಾಲಕ ಪ್ರತಾಪಸಿಂಹ ನಾಯಕ್‌, ನಿರ್ದಿಷ್ಟ ವಿಚಾರಧಾರೆ, ರಾಷ್ಟ್ರೀಯತೆ, ಜನಸಾಮಾನ್ಯರ ನಾಡಿಮಿಡಿತದಿಂದ ರಾಜ್ಯದಲ್ಲಿ ನಮ್ಮ ಸರಕಾರದ ಪರವಾದ ಭಾವನೆ ಜನರಲ್ಲಿದೆ. ಇದನ್ನು ಉಳಿಸಲು ನಾವು ಕೆಲಸ ಮಾಡಬೇಕಾಗಿದೆ. ಆದರೆ ಕೋರ್ಟ್‌ ಆದೇಶವನ್ನೇ ಒಪ್ಪದಂತಹ ಸ್ಥಿತಿ ಇರುವಂತ ಒಂದು ವರ್ಗವನ್ನು ಓಲೈಸುವ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಲ್ಲಿ ರಾಜ್ಯದ ಪರಿಸ್ಥಿತಿ ಏನಾದೀತು ಎಂಬುದನ್ನು ಜನರಿಗೆ ತಿಳಿಸುವ ಕಾಲ ಬಂದಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next