Advertisement

ಈಶ್ವರಪ್ಪ ನಿವೃತ್ತಿ ನಿರ್ಧಾರ ವಾಪಸ್‌ ಪಡೆಯಲಿ: ರೇಣುಕಾಚಾರ್ಯ

09:05 PM Apr 11, 2023 | Team Udayavani |

ಹೊನ್ನಾಳಿ: ಬಿಜೆಪಿ ಹಿರಿಯ ನಾಯಕ ಕೆ.ಎಸ್‌. ಈಶ್ವರಪ್ಪ ತಮ್ಮ ಚುನಾವಣ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರವನ್ನು ತತ್‌ಕ್ಷಣ ವಾಪಸ್‌ ಪಡೆದು ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳಬೇಕೆಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರೊಂದಿಗೆ ಪಕ್ಷ ಕಟ್ಟಿ ಬೆಳೆಸಲು ಈಶ್ವರಪ್ಪ ಕೂಡ ಕಾರಣರಾಗಿದ್ದಾರೆ.

Advertisement

ಅವರ ಅನುಭವ, ಸೇವೆ ಪಕ್ಷಕ್ಕೆ ಅಗತ್ಯವಿದೆ. ಈಶ್ವರಪ್ಪನವರು ಬಿಜೆಪಿ ರಾಜ್ಯಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 1989ರಲ್ಲಿ ವಿಧಾನಸಭೆ ಪ್ರವೇಶಿಸಿ ಹಲವಾರು ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ಅನೇಕ ಇಲಾಖೆಗಳ ಸಚಿವರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಲ್ಲದೆ ಉಪ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ತಮ್ಮ ನಿರ್ಧಾರವನ್ನು ಪುನರ್‌ ಪರಿಶೀಲಿಸಿ ತಮ್ಮ ಘೋಷಣೆ ವಾಪಸ್‌ ಪಡೆಯಬೇಕು. ಮತ್ತೆ ಚುನಾವಣೆಯಲ್ಲಿ ಸ್ಪ ರ್ಧಿಸಿ ಗೆಲುವು ಸಾಧಿಸಬೇಕೆಂಬುದು ನನ್ನ ಆಶಯ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next