Advertisement

ಹೈಕೋರ್ಟ್ ಮೊದಲು ನಿರ್ಧರಿಸಲಿ; ಹಿಜಾಬ್ ಕೇಸ್ ಪ್ರವೇಶಕ್ಕೆ ನಿರಾಕರಿಸಿದ ಸುಪ್ರೀಂ

12:17 PM Feb 10, 2022 | Team Udayavani |

ನವದೆಹಲಿ : ಪ್ರಸ್ತುತ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ನ ಅನುಮತಿಯನ್ನು ಪರಿಶೀಲಿಸುತ್ತಿರುವ ಕರ್ನಾಟಕ ಹೈಕೋರ್ಟ್‌ನಿಂದ ಅರ್ಜಿಗಳನ್ನು ವರ್ಗಾಯಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ನಿರ್ದಿಷ್ಟ ದಿನಾಂಕವನ್ನು ನೀಡುವುದಕ್ಕೆ ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.

Advertisement

ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಪೀಠದ ಮುಂದೆ ಹಿರಿಯ ವಕೀಲ ಕಪಿಲ್ ಸಿಬಲ್ ಈ ವಿಷಯವನ್ನು ಪ್ರಸ್ತಾಪಿಸಿದ್ದರು. ಕರ್ನಾಟಕದ ವಿವಾದ ಇಡೀ ದೇಶದಲ್ಲಿ ಹರಡುತ್ತಿದೆ ಎಂದು ಎಂದು ಸಿಬಲ್ ಮನವಿ ಸಲ್ಲಿಸಿದರು.

ಕರ್ನಾಟಕ ಹೈಕೋರ್ಟ್ ಈಗಾಗಲೇ ಸಮಸ್ಯೆಯನ್ನು ಪರಿಶೀಲಿಸುತ್ತಿದ್ದು, ಅದನ್ನು ನಿರ್ಧರಿಸಲು ಅವಕಾಶ ನೀಡಬೇಕು. “ಈ ಹಂತದಲ್ಲಿ ನಾವೇಕೆ ಪ್ರವೇಶಮಾಡಬೇಕು? ಅದು ಚೆನ್ನಾಗಿ ಕಾಣುತ್ತಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next