Advertisement

“ಮೋದಿ ಸಮಾವೇಶಕ್ಕಾಗಿ ಒಂದು ದಿನ ಮೀಸಲಿಡೋಣ’

11:40 PM Apr 11, 2019 | Team Udayavani |

ಕಾಪು: ಪ್ರಧಾನಿಯವರು ಎ. 13ರಂದು ಮಂಗಳೂರಿಗೆ ಭೇಟಿ ನೀಡಲಿದ್ದು, ನಾವು ನಮ್ಮ ಒಂದು ದಿನವನ್ನು ಅವರಿಗಾಗಿ ಮೀಸಲಿಟ್ಟು ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುರೇಶ್‌ ಶೆಟ್ಟಿ ಗುರ್ಮೆ ಹೇಳಿದರು.

Advertisement

ಕಳತ್ತೂರು ಗುರ್ಮೆಯಲ್ಲಿ ಜರಗಿದ ಎಲ್ಲೂರು ಜಿ. ಪಂ. ವ್ಯಾಪ್ತಿಯ ಮಹಾ ಶಕ್ತಿ ಕೇಂದ್ರದ ಜನಪ್ರತಿನಿಧಿಗಳು ಮತ್ತು ಸ್ಥಾನೀಯ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಎಲ್ಲೂರು ಕ್ಷೇತ್ರದ ಜಿ.ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ, ತಾ.ಪಂ. ಸದಸ್ಯೆ ಶಶಿಪ್ರಭಾ ಶೆಟ್ಟಿ, ಕಾಪು ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರಳೀಧರ್‌ ಪೈ, ಉಪಾಧ್ಯಕ್ಷ ಸುರೇಂದ್ರ ಪಣಿಯೂರು, ಪಕ್ಷದ ಪ್ರಮುಖ್‌ ಗಂಗಾಧರ ಸುವರ್ಣ, ಎಲ್ಲೂರು ಗ್ರಾ.ಪಂ. ಅಧ್ಯಕ್ಷೆ ವಸಂತಿ ಮಧ್ವರಾಜ್‌, ಕುತ್ಯಾರು ಗ್ರಾ.ಪಂ. ಅಧ್ಯಕ್ಷ ಧೀರಜ್‌ ಶೆಟ್ಟಿ, ಮಜೂರು ಗ್ರಾ.ಪಂ. ಅಧ್ಯಕ್ಷ ಸಂದೀಪ್‌ ರಾವ್‌, ಬಡಾ ಗ್ರಾ.ಪಂ. ಉಪಾಧ್ಯಕ್ಷೆ ಇಂದಿರಾ ಶೆಟ್ಟಿ, ಮಜೂರು ಗ್ರಾ.ಪಂ. ಉಪಾಧ್ಯಕ್ಷೆ ಸಹನಾ ತಂತ್ರಿ, ವಿವಿಧ ಸ್ಥಾನೀಯ ಸಮಿತಿಯ ಅಧ್ಯಕ್ಷರಾದ ಸತೀಶ್‌ ಶೆಟ್ಟಿ ಗುಡ್ಡೆಚ್ಚಿ, ಆಲ್ವಿನ್‌ ಸುಕುಮಾರ್‌, ಉದಯ್‌ ಕುಮಾರ್‌, ಪ್ರಮುಖರಾದ ಚಂದ್ರಶೇಖರ್‌ ಶೆಟ್ಟಿ, ಶಿವರಾಮ ಭಂಡಾರಿ, ಗಂಗಾಧರ್‌ ಶೆಟ್ಟಿ, ಹರಿಣಾಕ್ಷ ಶೆಟ್ಟಿ, ಗಂಗಾಧರ ಆಚಾರ್ಯ, ಲತಾ ಆಚಾರ್ಯ, ಗಣೇಶ್‌ ಶೆಟ್ಟಿ ಪೈಯ್ನಾರು, ಸುರೇಶ್‌ ದೇವಾಡಿಗ ಬೆಳಪು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next