Advertisement

B. Nagendra ರಾಜೀನಾಮೆ ನೀಡಲಿ: ಸಚಿವ ಪ್ರಹ್ಲಾದ ಜೋಶಿ

09:59 PM May 28, 2024 | Team Udayavani |

ಹುಬ್ಬಳ್ಳಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಹಣ ದುರುಪಯೋಗ ಸಂಬಂಧ ಸಚಿವರು ಹಾಗೂ ಉನ್ನತಾಧಿಕಾರಿಗಳ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಕೂಡಲೇ ಸಚಿವ ಬಿ. ನಾಗೇಂದ್ರ ರಾಜೀನಾಮೆ ಪಡೆಯಬೇಕೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಒತ್ತಾಯಿಸಿದ್ದಾರೆ.

Advertisement

ಈ ಕುರಿತು ಪ್ರಕಟನೆ ನೀಡಿರುವ ಅವರು, ಚಂದ್ರಶೇಖರ್‌ ಅವರು 187 ಕೋಟಿ ರೂ. ಅವ್ಯವಹಾರ ಸಂಬಂಧ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್‌ನಲ್ಲಿ ಮಂತ್ರಿ ಹಾಗೂ ಅ ಧಿಕಾರಿಗಳ ಹೆಸರು ನಮೂದಿಸಿದ್ದಾರೆ. ಲೂಟಿ ಸರಕಾರ ಎಂಬುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು. ಸಿಎಂ ಸಿದ್ದರಾಮಯ್ಯ ಕೂಡಲೇ ಸಚಿವ ನಾಗೇಂದ್ರ ರಾಜೀನಾಮೆ ಪಡೆಯಬೇಕು. ರಾಜ್ಯದಲ್ಲಿ ಭ್ರಷ್ಟಾಚಾರ ಗ್ಯಾರಂಟಿ ಸರಕಾರ ರಚನೆಯಾಗಿ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಿದ್ದಾರೆ.

ಪರಿಶಿಷ್ಟ ಸಮುದಾಯಕ್ಕೆ ಬಳಕೆಯಾಗಬೇಕಿದ್ದ ಅನುದಾನವನ್ನು ಅನ್ಯ ಉದ್ದೇಶಕ್ಕೆ ಬಳಸಿಕೊಳ್ಳಲು ಪ್ರಭಾವಿಗಳು ಕೈಯಾಡಿಸಿರುವ ಶಂಕೆ ವ್ಯಕ್ತವಾಗಿದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next